September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya
error: Content is protected !!