27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

ಕೊಕ್ಕಡ:   ಬಯಲು ಆಲಯ ಮತ್ತು ಗಂಟೆಗಳ ಹರಕೆಯ  ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ  ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ  ನಾಗೇಶ ತಂತ್ರಿಗಳ ವರ ನೇತೃತ್ವದಲ್ಲಿ  ಮಾಘ ಶುದ್ಧ ಚತುರ್ಥಿ ಫೆ 13 ರಂದು ಮಂಗಳವಾರ ಬೆಳಿಗ್ಗೆ  108  ತೆಂಗಿನಕಾಯಿ ಗಣಹೋಮ ಹಾಗೂ ರಾತ್ರಿ  ಸಂಭ್ರಮದ  ಮೂಡಪ್ಪ  ಸೇವೆ ವೈಭವದಿಂದ ಸುಸಂಪನ್ನಗೊಂಡಿತು.                                       

ಬೆಳಿಗ್ಗೆ ಯಿಂದ   ರಾತ್ರಿಯವರೆಗೂ  ದೇವಸ್ಥಾನ ಮುಂಭಾಗದ ಬಯಲು ವೇದಿಕೆಯಲ್ಲಿ  ವಿವಿಧ ಭಜನಾ ತಂಡಗಳಿಂದ ಉಪ್ಪಿನಂಗಡಿಯ ವಾಮನ ನಾಯಕ್ ನೇತೃತ್ವದಲ್ಲಿ ನಿರಂತರ  ಭಜನಾ ಸೇವೆ ನಡೆಯಿತು. ,ಸಂಜೆ ಶ್ರೀ ಗಣೇಶ ರಂಗಮಂಟಪದಲ್ಲಿ  ಶ್ರೀ ಕ್ಷೇತ್ರ ಸೌತಡ್ಕದ  ಪುಟಾಣಿ ವಿದ್ಯಾರ್ಥಿಗಳಿಂದ   “ಚಿಣ್ಣರ ಚಿಲಿಪಿಲಿ”, ಪುತ್ತೂರು ಶ್ರೀ ಮೂಕಾಂಬಿಕಾ  ಕಲ್ಚರಲ್ ಅಕಾಡೆಮಿಯ ಕೊಕ್ಕಡ ಶಾಖೆಯ ವಿದ್ಯಾರ್ಥಿಗಳಿಂದ ವಿದ್ವಾನ್ ದೀಪಕ್ ಕುಮಾರ್,ವಿದುಷಿ  ಪ್ರೀತಿ ಕಲಾ ಮತ್ತು ವಿದ್ವಾನ್ ಗಿರೀಶ್ ಕುಮಾರ್ ನಿರ್ದೇಶನದಲ್ಲಿ   “ನೃತ್ಯಾಂ ಜಲಿ “ಮತ್ತು ರಾತ್ರಿ   ಝೀ ಕನ್ನಡ  ವಾಹಿನಿಯ  ದ..ಕ. ಜಿಲ್ಲೆಯ  ಬಿ.ಸಿ.ರೋಡಿನ  ನೃತ್ಯ ತಂಡದ  ತುಳು ಚಲನಚಿತ್ರ ನಿರ್ದೇಶಕ  ವಿನೋದ್ ರಾಜ್ ನೇತೃತ್ವದ “ಎಕ್ಸ್ಟೀಮ್ ಡಾನ್ಸ್ ಕ್ರೂ ” ತಂಡದಿಂದ  “ಡಾನ್ಸ್ ಕರ್ನಾಟಕ ಡಾನ್ಸ್ ”  ನೃತ್ಯ -ಗಾನ -ಸಂಭ್ರಮ  ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮ ನಡೆಯಿತು. ಧರ್ಣಪ್ಪ ಎಂ.ಪಟ್ಟೂರು ಕಾರ್ಯಕ್ರಮ ನಿರೂಪಿಸಿದರು.                                                                               

  ಶ್ರೀ ಮಹಾಗಣಪತಿ ಕ್ಷೇತ್ರವನ್ನು ವಿಶೇಷವಾಗಿ ಫಲ -ಪುಷ್ಪ- ವಿದ್ದ್ಯುದ್ದೀಪಾಲಂಕಾರ  ಹಾಗು  ಆಕರ್ಷಕ ರಂಗವಲ್ಲಿಗಳಿಂದ  ಶೋಭಾಯಮಾನವಾಗಿ ಶೃಂಗರಿಸಲಾಗಿತ್ತು.  ವಿವಿಧ ವಾದ್ಯ ವೈಭವಗಳೊಂದಿಗೆ  ರಾತ್ರಿ ಶ್ರೀ ದೇವರ  ಸನ್ನಿಧಿಯಲ್ಲಿ  ಮೂಡಪ್ಪ ಸೇವೆ ಸಂಪನ್ನಗೊಂಡಿತು. ಸಹಸ್ರಾರು ಭಕ್ತಾದಿಗಳು ಮಹೋತ್ಸವ ಸಂಭ್ರಮ ಕ್ಕೆ  ಸಾಕ್ಷಿಯಾಗಿದ್ದರು. ಸುಮಾರು 4೦೦೦ಕ್ಕೂ ಅಧಿಕ ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.  ಇಡೀ ದಿನ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ದೇವಸ್ಥಾ ನದ  ಆಡಳಿತಾಧಿಕಾರಿ ತಹಸೀಲ್ದಾರ್ ಪೃಥ್ವಿ  ಸಾನಿಕಂ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್  ಪಕ್ಕಳ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರು ಪ್ಪಾಡಿ, ಅರ್ಚಕರಾದ ವೇದಮೂರ್ತಿ ಸತ್ಯಪ್ರಿಯ ಕಲ್ಲೂರಾಯ,ಸುಬ್ರಹ್ಮಣ್ಯ ತೊಡ್ತಿಲ್ಲಾಯ ಮತ್ತು ಗುರುರಾಜ ಉಪ್ಪಾರ್ಣ,ಪಾಕತಜ್ಞ ಭೀಮ ಭಟ್, ಕ್ಷೇತ್ರ ಕ್ಕೆ  ಸೇವಾ ಕೌಂಟರ್ ಕೊಡುಗೆ ನೀಡಿದ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸುಧಾಕರ ಕೊಠಾರಿ, ಶ್ರೀ ಮಹಾಗಣಪತಿ ಸೇವಾ  ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್, ಡಾ!ಮೋಹನದಾಸ ಗೌಡ,ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರು ಹಾಗು ಸಿಬಂದಿ ವರ್ಗ  ಮತ್ತು ಭಕ್ತಾದಿಗಳು   ಉಪಸ್ಥಿತರಿದ್ದರು, .

Related posts

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya
error: Content is protected !!