27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

ಅಂಡಿಂಜೆ: ಬೆಳ್ತಂಗಡಿ ತಾಲೂಕಿನ “ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ” ಇದರ ವಾರ್ಷಿಕ ಮಹಾಸಭೆಯನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ, ಪಂಚಾಯತ್ ಅಧ್ಯಕ್ಷರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.

ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ಮಲ್ಲಿಕಾ ಇವರು ಒಕ್ಕೂಟದ ವರದಿಯನ್ನು ಹಾಗೂ ಜಮಾ ಖರ್ಚಿನ ವಿವರವನ್ನು ಸಭೆಯಲ್ಲಿ ಮಂಡಿಸಿ ಸಭೆಯ ಅನುಮೋದನೆಯನ್ನು ಪಡೆದರು.ನಿರ್ಗಮಿತ ಪದಾಧಿಕಾರಿಗಳು ನೂತನವಾಗಿ ಆಯ್ಕೆ ಆದ ಪದಾಧಿಕಾರಿಗಳಿಗೆ ಒಕ್ಕೂಟದ ದಾಖಲಾತಿಗಳನ್ನು ಹಸ್ತಾಂತರಿಸುವದರೊಂದಿಗೆ ಹೂಗುಚ್ಚ ನೀಡುವ ಮೂಲಕ ವೇದಿಕೆಗೆ ಬರಮಾಡಿಕೊಳ್ಳುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.

ಮಾದರಿ ಒಕ್ಕೂಟದ ದೂರದೃಷ್ಟಿ ಮತ್ತು ವ್ಯಾಪಾರ ಅಭಿವೃದ್ಧಿ ಯೋಜನೆ ವಾರ್ಷಿಕ ಕ್ರಿಯಾ ಯೋಜನೆ ಕರಡು ವರದಿಯನ್ನು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು.ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ ಜೈನ್‌ ಇವರು ಸಂಜೀವಿನಿ ಕಾರ್ಯ ಕ್ರಮಗಳ ಬಗ್ಗೆ ಹಾಗೂ ವಾರ್ಷಿಕ ಕ್ರಿಯಾಯೋಜನೆ ಕುರಿತಂತೆ
ವಿಸ್ತ್ರತವಾದ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉತ್ತಮ ದಾಖಲಾತಿ ಹೊಂದಿದ ಸ್ವಸಹಾಯ ಗುಂಪು ಹಾಗೂ ಶಿಸ್ತಿನ ಸ್ವಸಹಾಯ ಗುಂಪುಗಳನ್ನು ಆಯ್ಕೆ ಮಾಡಿ ಬಹುಮಾನ ವಿತರಿಸಲಾಯಿತು. ಅತಿಥಿಗಳನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾಯ೯ಕ್ರಮದಲ್ಲಿ ಪಂಚಾಯತ್ ನ ಮಾಜಿ ಅಧ್ಯಕ್ಷರು, ಉಪಾದ್ಯಕ್ಷರು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಎಲ್ಲಾ ಸ್ವಸಹಾಯ ಗುಂಪಿನ ಸದಸ್ಯರು, ಸಖಿಗಳು, ಎಫ್ ಎಲ್ ಸಿ ಆರ್ ಪಿ, ಎಲ್ ಸಿಆರ್ ಪಿ ಹಾಗೂ ಇತರೆ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Related posts

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya
error: Content is protected !!