September 6, 2026
ಗ್ರಾಮಾಂತರ ಸುದ್ದಿ

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

ಅಂಡಿಂಜೆ: ಬೆಳ್ತಂಗಡಿ ತಾಲೂಕಿನ “ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ” ಇದರ ವಾರ್ಷಿಕ ಮಹಾಸಭೆಯನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ, ಪಂಚಾಯತ್ ಅಧ್ಯಕ್ಷರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.

ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ಮಲ್ಲಿಕಾ ಇವರು ಒಕ್ಕೂಟದ ವರದಿಯನ್ನು ಹಾಗೂ ಜಮಾ ಖರ್ಚಿನ ವಿವರವನ್ನು ಸಭೆಯಲ್ಲಿ ಮಂಡಿಸಿ ಸಭೆಯ ಅನುಮೋದನೆಯನ್ನು ಪಡೆದರು.ನಿರ್ಗಮಿತ ಪದಾಧಿಕಾರಿಗಳು ನೂತನವಾಗಿ ಆಯ್ಕೆ ಆದ ಪದಾಧಿಕಾರಿಗಳಿಗೆ ಒಕ್ಕೂಟದ ದಾಖಲಾತಿಗಳನ್ನು ಹಸ್ತಾಂತರಿಸುವದರೊಂದಿಗೆ ಹೂಗುಚ್ಚ ನೀಡುವ ಮೂಲಕ ವೇದಿಕೆಗೆ ಬರಮಾಡಿಕೊಳ್ಳುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.

ಮಾದರಿ ಒಕ್ಕೂಟದ ದೂರದೃಷ್ಟಿ ಮತ್ತು ವ್ಯಾಪಾರ ಅಭಿವೃದ್ಧಿ ಯೋಜನೆ ವಾರ್ಷಿಕ ಕ್ರಿಯಾ ಯೋಜನೆ ಕರಡು ವರದಿಯನ್ನು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು.ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ ಜೈನ್‌ ಇವರು ಸಂಜೀವಿನಿ ಕಾರ್ಯ ಕ್ರಮಗಳ ಬಗ್ಗೆ ಹಾಗೂ ವಾರ್ಷಿಕ ಕ್ರಿಯಾಯೋಜನೆ ಕುರಿತಂತೆ
ವಿಸ್ತ್ರತವಾದ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉತ್ತಮ ದಾಖಲಾತಿ ಹೊಂದಿದ ಸ್ವಸಹಾಯ ಗುಂಪು ಹಾಗೂ ಶಿಸ್ತಿನ ಸ್ವಸಹಾಯ ಗುಂಪುಗಳನ್ನು ಆಯ್ಕೆ ಮಾಡಿ ಬಹುಮಾನ ವಿತರಿಸಲಾಯಿತು. ಅತಿಥಿಗಳನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾಯ೯ಕ್ರಮದಲ್ಲಿ ಪಂಚಾಯತ್ ನ ಮಾಜಿ ಅಧ್ಯಕ್ಷರು, ಉಪಾದ್ಯಕ್ಷರು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಎಲ್ಲಾ ಸ್ವಸಹಾಯ ಗುಂಪಿನ ಸದಸ್ಯರು, ಸಖಿಗಳು, ಎಫ್ ಎಲ್ ಸಿ ಆರ್ ಪಿ, ಎಲ್ ಸಿಆರ್ ಪಿ ಹಾಗೂ ಇತರೆ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Related posts

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya
error: Content is protected !!