ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!