23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ.2 ರಂದು ಹಿಂದೂ ಬಾಂಧವರಿಗೆ 62 ಕೆಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಮುಕ್ತ ಲೆವೆಲ್ ಮಾದರಿಯ 8 ಜನರ ಹಗ್ಗಜಗ್ಗಾಟ ನಡೆಯಲಿದೆ. ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೋಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯ, ಟೀಮ್ ದುರ್ಗಾನುಗ್ರಹ ಮುಗೇರಡ್ಕ ಹಾಗೂ ನಮೋ ಬ್ರಿಗೇಡ್ ಮುಗೇರಡ್ಕ ಇದರ ಪದಾಧಿಕಾರಿಗಳಾದ ಹಿರಿಯರಾದ ರಾಮಣ್ಣ ಗೌಡ ಎರ್ಮಲ, ಅಧ್ಯಕ್ಷರಾದ ಪ್ರಶಾಂತ್ ಎರ್ಮಲ, ಸಂಚಾಲಕರಾದ ಬಾಲಕೃಷ್ಣ ಗೌಡ ಹಾಗೂ ರಮೇಶ್ ನೆಕ್ಕರಾಜೆ, ಕಾರ್ಯದರ್ಶಿ ವರುಣ್ ನೆಕ್ಕರಾಜೆ, ಉಪಾಧ್ಯಕ್ಷರಾದ ಜಗದೀಶ್ ಅರ್ಬಿ, ಕೋಶಾಧಿಕಾರಿ ನಿತಿನ್ ಗೌಡ ಮುಂಡಾಜೆ ಸದಸ್ಯರಾದ ಸಚಿನ್ ಕಡಮ್ಮಜೆ, ಪುರಂದರ ನೈಮಾರು, ಸುಧರ್ಶನ್ ಅಲೆಕ್ಕಿ, ಯೋಗೀಶ್ ಪರಾರಿ,ತ್ರಿಶಾಂಕ್ ಪರಕ್ಕಾಜೆ, ತ್ರಿಲೋಕ್ ಪರಕ್ಕಾಜೆ.ಇವರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!