25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ.2 ರಂದು ಹಿಂದೂ ಬಾಂಧವರಿಗೆ 62 ಕೆಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಮುಕ್ತ ಲೆವೆಲ್ ಮಾದರಿಯ 8 ಜನರ ಹಗ್ಗಜಗ್ಗಾಟ ನಡೆಯಲಿದೆ. ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೋಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯ, ಟೀಮ್ ದುರ್ಗಾನುಗ್ರಹ ಮುಗೇರಡ್ಕ ಹಾಗೂ ನಮೋ ಬ್ರಿಗೇಡ್ ಮುಗೇರಡ್ಕ ಇದರ ಪದಾಧಿಕಾರಿಗಳಾದ ಹಿರಿಯರಾದ ರಾಮಣ್ಣ ಗೌಡ ಎರ್ಮಲ, ಅಧ್ಯಕ್ಷರಾದ ಪ್ರಶಾಂತ್ ಎರ್ಮಲ, ಸಂಚಾಲಕರಾದ ಬಾಲಕೃಷ್ಣ ಗೌಡ ಹಾಗೂ ರಮೇಶ್ ನೆಕ್ಕರಾಜೆ, ಕಾರ್ಯದರ್ಶಿ ವರುಣ್ ನೆಕ್ಕರಾಜೆ, ಉಪಾಧ್ಯಕ್ಷರಾದ ಜಗದೀಶ್ ಅರ್ಬಿ, ಕೋಶಾಧಿಕಾರಿ ನಿತಿನ್ ಗೌಡ ಮುಂಡಾಜೆ ಸದಸ್ಯರಾದ ಸಚಿನ್ ಕಡಮ್ಮಜೆ, ಪುರಂದರ ನೈಮಾರು, ಸುಧರ್ಶನ್ ಅಲೆಕ್ಕಿ, ಯೋಗೀಶ್ ಪರಾರಿ,ತ್ರಿಶಾಂಕ್ ಪರಕ್ಕಾಜೆ, ತ್ರಿಲೋಕ್ ಪರಕ್ಕಾಜೆ.ಇವರು ಉಪಸ್ಥಿತರಿದ್ದರು.

Related posts

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!