23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಫೆ.15ರಿಂದ 22 ರವರೆಗೆ ಎಡಪದವು ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಋತ್ವಿಜ್ವರ ಸ್ವಾಗತ, ಸ್ವಸ್ತಿವಾಚನ, ಸಾಮೂಹಿಕ ಪ್ರಾರ್ಥನೆ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ , ಮಹಾಪೂಜೆ ನಡೆಯಿತು,

ಉಗ್ರಾಣ ಮುಹೂರ್ತದ ಉದ್ಘಾಟನೆಯನ್ನು ಗುರುವಾಯನಕೆರೆ ಶ್ರೀ.ಕ್ಷೇ.ಧ.ಗ್ರಾ.ಯೋ ಯೋಜನಾಧಿಕಾರಿ ದಯಾನಂದ ಪೂಜಾರಿ ನೆರವೇರಿಸಿದರು.

ಕಾರ್ಯಾಲಯ ಉದ್ಘಾಟನೆಯನ್ನು ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ಪೇಜಾವರ ನೆರವೇರಿಸಿದರು.

ಈ ಸಂದರ್ಭದಲ್ಲಿಆಡಳಿತ ಮೊಕ್ತೇಸರ ಯೋಗಿಸ್ ಪೂಜಾರಿ ಕಡ್ತಿಲ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್‌ ಗೌಡ ಅಣವು, ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಭಟ್ ವಾದ್ಯಕೋಡಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಉದಯ ಟಿ. ತಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಆಡಳಿತ ಸಹ ಮೊಕ್ತಸರ ಸೇಸಪ್ಪ ರೈ ಮತ್ತು ಜನಾರ್ದನ ಗೌಡ ನಕಾಲು ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಪೊಸದೊಂಡಿ, ಜೊತೆ ಕಾರ್ಯದರ್ಶಿ ಗಣೇಶ್ ಬನಾರಿ, ಕಾರ್ಯಯಾಲ ಸಂಚಾಲಕ ವಾರಿಜ ಶೆಟ್ಟಿ, ವಿವಿಧ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya
error: Content is protected !!