July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವವನ್ನು ಫೆ. 15 ರಂದು ನಡೆಯಿತು.

ಫೆ.15 ರಿಂದ 29 ರವರೆಗೆ ನಡೆಯಲಿರುವ ಕರಿಮಣಿ ಉತ್ಸವಕ್ಕೆ ಯುವವಾಹಿನಿ ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ ದೀಪ ಪ್ರಜ್ವಲನೆ ಮಾಡಿ ಕರಿಮಣಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ನಗುಮೊಗದ ಸೇವೆಯಿಂದ ಮುಳಿಯ ಸಂಸ್ಥೆ ಯಶಸ್ವಿ ಶಿಖರವನ್ನು ತಲುಪಿದೆ ಎಂದರು.ಮುಳಿಯ ಮಾರ್ಕೆಟಿಂಗ್ ಕನ್ಸಲ್ಟನ್ಸಿ ವೇಣುಗೋಪಾಲ್ ಶರ್ಮ ಮಾತನಾಡಿ ವೆರೈಟಿ ಆಭರಣಕ್ಕೆ ಮುಳಿಯ ಜ್ಯುವೆಲ್ಸ್ ಹೆಸರುವಾಸಿಯಾಗಿದ್ದು 500 ಬಗೆಯ ವಿವಿಧ ವೆರೈಟಿಯ ಕರಿಮಣಿ ಆಭರಣಗಳು ಇವೆ.

ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ವೇದಿಕೆಯಲ್ಲಿ ಮುಳಿಯ ಎಕ್ಸಿಕ್ಯುಟಿವ್ ಅಫೀಸರ್ ಶಿವ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.

ಮುಳಿಯ ಬೆಳ್ತಂಗಡಿ ಶಾಖೆಯ ಮ್ಯಾನೇಜರ್ ಅಶೋಕ್ ಬಂಗೇರ ಸ್ವಾಗತಿಸಿದರು.

ಶಾಖ ಉಪ ಪ್ರಬಂಧಕ ದಿನೇಶ್ ರಾವ್ ವಂದಿಸಿದರು. ಸಿಬ್ಬಂದಿ ಜಯಲಕ್ಷ್ಮಿ ನಿರೂಪಿಸಿದರು. ಕಾರ್ಯಕ್ರಮದಲ್ಕಿ ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಶಾಂತ ಬಂಗೇರ, ಮುಳಿಯ ಶಾಖಾ ಉಪ ವ್ಯವಸ್ಥಾಪಕ ಲೋಹಿತ್ , ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya
error: Content is protected !!