23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ.2 ರಂದು ಹಿಂದೂ ಬಾಂಧವರಿಗೆ 62 ಕೆಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಮುಕ್ತ ಲೆವೆಲ್ ಮಾದರಿಯ 8 ಜನರ ಹಗ್ಗಜಗ್ಗಾಟ ನಡೆಯಲಿದೆ. ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೋಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯ, ಟೀಮ್ ದುರ್ಗಾನುಗ್ರಹ ಮುಗೇರಡ್ಕ ಹಾಗೂ ನಮೋ ಬ್ರಿಗೇಡ್ ಮುಗೇರಡ್ಕ ಇದರ ಪದಾಧಿಕಾರಿಗಳಾದ ಹಿರಿಯರಾದ ರಾಮಣ್ಣ ಗೌಡ ಎರ್ಮಲ, ಅಧ್ಯಕ್ಷರಾದ ಪ್ರಶಾಂತ್ ಎರ್ಮಲ, ಸಂಚಾಲಕರಾದ ಬಾಲಕೃಷ್ಣ ಗೌಡ ಹಾಗೂ ರಮೇಶ್ ನೆಕ್ಕರಾಜೆ, ಕಾರ್ಯದರ್ಶಿ ವರುಣ್ ನೆಕ್ಕರಾಜೆ, ಉಪಾಧ್ಯಕ್ಷರಾದ ಜಗದೀಶ್ ಅರ್ಬಿ, ಕೋಶಾಧಿಕಾರಿ ನಿತಿನ್ ಗೌಡ ಮುಂಡಾಜೆ ಸದಸ್ಯರಾದ ಸಚಿನ್ ಕಡಮ್ಮಜೆ, ಪುರಂದರ ನೈಮಾರು, ಸುಧರ್ಶನ್ ಅಲೆಕ್ಕಿ, ಯೋಗೀಶ್ ಪರಾರಿ,ತ್ರಿಶಾಂಕ್ ಪರಕ್ಕಾಜೆ, ತ್ರಿಲೋಕ್ ಪರಕ್ಕಾಜೆ.ಇವರು ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya
error: Content is protected !!