ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಬೆಳ್ತಂಗಡಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ವರ್ಗಾವಣೆಯಾಗಿದ್ದಾರೆ.

ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಕರ್ತವ್ಯದಲ್ಲಿದ್ದ ಭವಾನಿಶಂಕ‌ರ್ ಅವರನ್ನು ಸೋಮವಾರಪೇಟೆ ತಾಲೂಕು ಪಂಚಾಯತ್‌ಗೆ ವರ್ಗಾವಣೆಗೊಳಿಸಲಾಗಿದ್ದು ಸೋಮವಾರಪೇಟೆಯಲ್ಲಿದ್ದ ಜಯಣ್ಣ ಅವರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಗಮಿಸಲಿದ್ದಾರೆ.


ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿ ರಾಜೇಶ್.ಕೆ.ಅವರು ಮೈಸೂರಿನ ಬೋಗಾಧಿಗೆ ವರ್ಗಾವಣೆಯಾಗಿದ್ದಾರೆ. ಗುಳೇದಗುಡ್ಡ ಪುರಸಭೆಯ ಮುಖ್ಯಾಧಿಕಾರಿ ಎ.ಹೆಚ್.ಮುಜಾವರ ಅವರು ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

error: Content is protected !!