25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಜಿರೆ : ಮಂಗಳೂರಿನ ಶ್ರೀನಿವಾಸ ಯೂನಿವರ್ಸಿಟಿ ಹಾಗೂ ಸಮೂಹ ಸಂಸ್ಥೆಗಳ ಎ. ಶಾಮ ರಾವ್ ಪೌಂಡೇಶನ್ ವತಿಯಿಂದ ಸಂಸ್ಥಾಪಕರ ದಿನದ ಅಂಗವಾಗಿ ಕೊಡಮಾಡುವ ಎ. ಶಾಮ ರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಮಂಗಳೂರಿನ ಮುಕ್ಕದ ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಸ್ವೀಕರಿಸಿದರು.

ಶ್ರೀನಿವಾಸ ಯೂನಿವರ್ಸಿಟಿಯ ಕುಲಪತಿ ಸಿಎ. ರಾಘವೇಂದ್ರ ರಾವ್, ಉಪ ಕುಲಪತಿ ಶ್ರೀನಿವಾಸ ರಾವ್ , ಆಡಳಿತ ಮಂಡಳಿಯ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್ ರಾವ್ ಹಾಗೂ ಮಿತ್ರಾ ಎಸ್ ರಾವ್ , ಅತಿಥಿಗಳಾದ ಬೆಂಗಳೂರಿನ ರಾಜೀವ ಗಾಂಧಿ ಹೆಲ್ತ್ ಸೈನ್ಸ್ ಇದರ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ , ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಕಾರ್ಯ ನಿರ್ವಾಹಕ ನಿರ್ದೇಶಕ ಆಶಿಷ್ ಪಾಂಡೆ , ಮೌಲ್ಯಮಾಪನ ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ , ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಡಾ.ಎ.ಆರ್ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya
error: Content is protected !!