24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಜಿರೆ : ಮಂಗಳೂರಿನ ಶ್ರೀನಿವಾಸ ಯೂನಿವರ್ಸಿಟಿ ಹಾಗೂ ಸಮೂಹ ಸಂಸ್ಥೆಗಳ ಎ. ಶಾಮ ರಾವ್ ಪೌಂಡೇಶನ್ ವತಿಯಿಂದ ಸಂಸ್ಥಾಪಕರ ದಿನದ ಅಂಗವಾಗಿ ಕೊಡಮಾಡುವ ಎ. ಶಾಮ ರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಮಂಗಳೂರಿನ ಮುಕ್ಕದ ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಸ್ವೀಕರಿಸಿದರು.

ಶ್ರೀನಿವಾಸ ಯೂನಿವರ್ಸಿಟಿಯ ಕುಲಪತಿ ಸಿಎ. ರಾಘವೇಂದ್ರ ರಾವ್, ಉಪ ಕುಲಪತಿ ಶ್ರೀನಿವಾಸ ರಾವ್ , ಆಡಳಿತ ಮಂಡಳಿಯ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್ ರಾವ್ ಹಾಗೂ ಮಿತ್ರಾ ಎಸ್ ರಾವ್ , ಅತಿಥಿಗಳಾದ ಬೆಂಗಳೂರಿನ ರಾಜೀವ ಗಾಂಧಿ ಹೆಲ್ತ್ ಸೈನ್ಸ್ ಇದರ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ , ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಕಾರ್ಯ ನಿರ್ವಾಹಕ ನಿರ್ದೇಶಕ ಆಶಿಷ್ ಪಾಂಡೆ , ಮೌಲ್ಯಮಾಪನ ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ , ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಡಾ.ಎ.ಆರ್ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!