25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ವಿದ್ಯಾಭ್ಯಾಸ ಮುಗಿಸಿ E.S. ಆಸ್ಪತ್ರೆ ಬೆಂಗಳೂರು, ಆರೋಗ್ಯ ಕೇಂದ್ರ ಕೊಕ್ಕಡ, ಸಮುದಾಯ ಆರೋಗ್ಯ ಕೇಂದ್ರ ಬೆಳ್ತಂಗಡಿ ಮತ್ತು ಪ್ರಾಥಮಿಕ ಅರೋಗ್ಯ ಕೇಂದ್ರ, ವೇಣೂರು ಇಲ್ಲಿ ಸುಮಾರು 37 ವರ್ಷಗಳ ಕಾಲ ಬಡರೋಗಿಗಳ ಜೊತೆ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ವಿಜಯ ಕುಮಾರಿ ಕೆ ಇವರ ಸೇವೆಯನ್ನ ಗೌರವಿಸುತ್ತ ಫೆ. 12 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ನಡೆದ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಗುರುತಿಸಿ ಸನ್ಮಾನಿಸಲಾಯಿತು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಅಧ್ಯಕ್ಷರಾದ ಜೆಸಿ HGF ರಂಜಿತ್ ಎಚ್ ಡಿ ಯವರು ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮದಲ್ಲಿ ವಲಯದ ಉಪಾಧ್ಯಕ್ಷರಾದ JFM ಶಂಕರ್ ರಾವ್ ಬಿ, ಲೇಡಿ ಜೆಸಿ ಸಂಯೋಜಕರಾದ ಜೆಸಿ ಶ್ರುತಿ ರಂಜಿತ್, ಕಾರ್ಯಕ್ರಮದ ನಿರ್ದೇಶಕರಾದ ಜೆಸಿ ಪ್ರೀತಮ್ ಶೆಟ್ಟಿ, ಜೆಸಿ ಪ್ರಮೋದ್, ಘಟಕದ ಪೂರ್ವಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

ನಂತರ ಜೆಸಿ ಕುಟುಂಬ ಸದಸ್ಯರಿಗೆ “ಜೆಸಿ ಸಂಭ್ರಮ” ಕುಟುಂಬೋತ್ಸವ ಕಾರ್ಯಕ್ರಮವು ಘಟಕದ ಉಪಾಧ್ಯಕ್ಷರಾದ
ಪ್ರೀತಮ್ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ಜೆಸಿ ಸಚಿನ್ ಸಾಲಿಯಾನ್ ಇವರ ನಿರೂಪಣೆಯೊಂದಿಗೆ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ವೇದಿಕೆ ಅಹ್ವಾನವನ್ನು ಜೆಸಿ ರಜತ್, ಜೆಸಿ ವಾಣಿನ್ನು ಜೆಸಿ ರಾಮಕೃಷ್ಣ, ಹಾಗೂ ಸನ್ಮಾನ ಪತ್ರವನ್ನು ಜೆಸಿ ಮಾಮಿತಾ ಸುಧೀರ್ ವಾಚಿಸಿದರು. ಕಾರ್ಯದರ್ಶಿ ಜೆಸಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya
error: Content is protected !!