23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ


ತೆಕ್ಕಾರು, ಶ್ರೀ ನಾಭಿರಾಜ್ ಹೆಗ್ಡೆ ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮ ನಿವಾಸಿ ನಾಭಿರಾಜ್ ಹೆಗ್ಡೆ ಸಮಾಜ ಸೇವಾ ಚಟುವಟಿಕೆಗಳ 000pಮೂಲಕ ಜನಾನುರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಹಲವಾರು ಸಮಾಜಮುಖಿ ಚಟುವಟಿಕೆಗಳಲಿ ಭಾಗವಹಿಸುತಿದ್ದರು ತೆಕ್ಕಾರು ಯುವಕ ಮಂಡಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಟ್ಟಿಕಳ ಇದರ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಮಾದರಿರೀತಿಯಲ್ಲಿ ವಾರ್ಷಿಕೋತ್ಸವ ಆಯೋಜಿಸಿ ಶಿಕ್ಷಣ ಸಂಸ್ಥೆಗಳ ಪೋಷಕರಾಗಿದ್ದ ಇವರು ಬಿದ್ದುಕಲ್ಲು ಶ್ರೀ ಅದಿನಾತೇಶ್ವರ ಬಸದಿ, ತೆಕ್ಕಾರು ಇದರ ಅಧ್ಯಕ್ಷರಾಗಿ ಅಭಿವೃದ್ಧಿ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಮೂಲತ ನಾರಾವಿಯ .. ತೆಕ್ಕಾರು ಮರಮ ಅನಂತಯ್ಯ ಕೊಂಡೆಯವರ ಪುತ್ರಿಯನ್ನು ವಿವಾಹವಾಗಿ ಮರಮದಲ್ಲೆ ನೆಲೆಸಿ ಪ್ರಗತಿಪರ ಕೃಷಿಕರಾಗಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಜವರ್ಮ ಜೈನ್, ಸಹೋದರ ಬೆಳ್ತಂಗಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಶ್ರೀ ವಿನಯ ಹೆಗ್ಡೆ, ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ, ಉಪ್ಪಿನಂಗಡಿಯ ಸಾಮಾಜಿಕ ಮುಂದಾಳು ಮಹೇಂದ್ರ ವರ್ಮ, ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ ಪೂಜಾರಿ, ಟ್ರಸ್ಟಿಗಳಾದ ಮಂಜುನಾಥ್ ಸಾಲ್ಯಾನ್, ರವೀಂದ್ರ ಪಿಲಿಬೈಲ್, ಸತೀಶ್ ಹೊಸ ಮುಗ್ರು ಹಾಗೂ ತೆಕ್ಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್, ನಿರ್ದೇಶಕರು , ಸಿಬ್ಬಂದಿ ವರ್ಗ ಹಾಗೂ ಕುಟುಂಬ ವರ್ಗ ಮತ್ತು ಗ್ರಾಮಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!