23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ

ಬೆಳ್ತಂಗಡಿ: ಫೆ.15 ರಂದು ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿಯನ್ನು ನ್ಯಾಯತರ್ಪು ಗ್ರಾಮದ ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ (58 ವರ್ಷ) ಎಂದು ಗುರುತಿಸಲಾಗಿದೆ.

ಫೆ.14ರಂದು ಮಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದ ರೈಲು, ಮುರ ಸಮೀಪ ಹಳಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿಯಾಗಿದೆ. ತಕ್ಷಣ ರೈಲು ನಿಲ್ಲಿಸಿದ ಲೋಕೋ ಪೈಲೆಟ್, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ
ಕರೆ ತಂದಿದ್ದಾರೆ. ರೈಲು ನಿಲ್ದಾಣದಿಂದ ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದು, ಆಂಬ್ಯುಲೆನ್ಸ್ ತಲುಪುವಷ್ಟರಲ್ಲಿ ಆ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ಮೃತ ದೇಹ ರೈಲ್ವೇ ಪೊಲೀಸ್ ಅಧಿಕಾರಿಗಳ ಸುಪರ್ದಿಯಲ್ಲಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿತ್ತು.
ಇದೀಗ ಮೃತರ ಗುರುತು ಪತ್ತೆಯಾಗಿದ್ದು, ಇವರು ನ್ಯಾಯತರ್ಪು ಗ್ರಾಮದ ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗೊತ್ತಾಗಿದೆ. ಇವರು ಕೃಷಿಕರಾಗಿದ್ದು ಸ್ವಲ್ಪಮಟ್ಟಿಗೆ ಅನಾರೋಗ್ಯದ ಕಾರಣ ಪುತ್ತೂರು ಆಸ್ಪತ್ರೆಗೆ ಹೋಗಿ ಸ್ನೇಹಿತನಲ್ಲಿ ಮಾತಾನಾಡಿ ಬರುವುದಾಗಿ ನಾಳದಿಂದ ಫೆ.14 ರಂದು ಬಸ್ ಹತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ. ಇವರು ಪುತ್ತೂರಿನ ಮುರಕ್ಕೆ ಯಾಕೆ ಹೋಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿಲ್ಲ.


ಮೃತರು ಪತ್ನಿ ರಾಜೀವಿ ಹಾಗೂ ಇಬ್ಬರು ಪುತ್ರಿಯರಾದ ಭೂಮಿಕಾ, ದೀಕ್ಷಿತ ಮತ್ತು ಸಹೋದರ, ಸಹೋದರಿಯನ್ನು, ಬಂಧು-ಬಳಗವನ್ನು ಅಗಲಿದ್ದಾರೆ. ಸಂಬಂಧಿಕರು ನೀಡಿದ ಮಾಹಿತಿಯಂತೆ ಮಂಗಳೂರು ಜಿಲ್ಲಾ ಆಸ್ಪತೆಯಲ್ಲಿದ್ದ ಮೃತರ ಶವವನ್ನು ಕುಟುಂಬಸ್ಥರು ಗುರುತು ಪತ್ತೆ ಹಚ್ಚಿ ಮೃತರ ಮನೆಗೆ ತರಲಾಯಿತು.
ಈ ವ್ಯಕ್ತಿ ಹಿಂದೆ ನಾಳ ಅಂಚೆ ಕಚೇರಿಯಲ್ಲಿ ತಾತ್ಕಾಲಿಕವಾಗಿ ಸುಮಾರು 5-6 ವರ್ಷ ಗಳ ಕಾಲ ಪೋಸ್ಟ್ ಮಾನ್ ಅಗಿ ಕೆಲಸ ನಿರ್ವಹಿಸುತ್ತಿದ್ದರು.

Related posts

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya
error: Content is protected !!