25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಚೊಚ್ಚಲ 15 ನೇ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ, ಮುಖ್ಯವಾಗಿ ಕೃಷಿ ,ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿ ಜನಸಾಮಾನ್ಯರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 2024-25 ರಲ್ಲಿ ಗ್ಯಾರಂಟಿಗಳಿಗೆ ರೂ 52,000 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದು ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ಸಾವಿರದಿಂದ 55 ಸಾವಿರವನ್ನು ಒದಗಿಸುತ್ತಿದೆ. ಇದು ಒಂದು ಜಾಗತಿಕ ದಾಖಲೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 9 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆ ಜೊತೆಗೆ ಸುಮಾರು 21,168 ಕೋಟಿ ರೂ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮೋದನೆಗೊಂಡ 2230 ಕೋಟಿ ರೂಗಳ ಕಾಮಗಾರಿ ಯೋಜನೆಗೂ ಅನುಮೋದನೆ ನೀಡಿದೆ ಸರ್ಕಾರ. ಅಭಿವೃದ್ಧಿಯಲ್ಲಿ ಯಾವ ರಾಜಕಾರಣ ಇಲ್ಲಾ ಎಂಬುದು ಬಹಳ ಸ್ಪಷ್ಟವಾಗಿದೆ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟನ್ನು ರಾಜ್ಯದ ಸಮಸ್ತ ಜನರಿಗೆ ನೀಡಿದೆ ಎಂದು ತಿಳಿಸಿದ್ದಾರೆ.

Related posts

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!