25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಚೊಚ್ಚಲ 15 ನೇ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ, ಮುಖ್ಯವಾಗಿ ಕೃಷಿ ,ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿ ಜನಸಾಮಾನ್ಯರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 2024-25 ರಲ್ಲಿ ಗ್ಯಾರಂಟಿಗಳಿಗೆ ರೂ 52,000 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದು ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ಸಾವಿರದಿಂದ 55 ಸಾವಿರವನ್ನು ಒದಗಿಸುತ್ತಿದೆ. ಇದು ಒಂದು ಜಾಗತಿಕ ದಾಖಲೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 9 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆ ಜೊತೆಗೆ ಸುಮಾರು 21,168 ಕೋಟಿ ರೂ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮೋದನೆಗೊಂಡ 2230 ಕೋಟಿ ರೂಗಳ ಕಾಮಗಾರಿ ಯೋಜನೆಗೂ ಅನುಮೋದನೆ ನೀಡಿದೆ ಸರ್ಕಾರ. ಅಭಿವೃದ್ಧಿಯಲ್ಲಿ ಯಾವ ರಾಜಕಾರಣ ಇಲ್ಲಾ ಎಂಬುದು ಬಹಳ ಸ್ಪಷ್ಟವಾಗಿದೆ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟನ್ನು ರಾಜ್ಯದ ಸಮಸ್ತ ಜನರಿಗೆ ನೀಡಿದೆ ಎಂದು ತಿಳಿಸಿದ್ದಾರೆ.

Related posts

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!