March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ : ಕೈಗಾರಿಕಾ ನೀತಿ 2020-25 ರಲ್ಲಿ ತಂತ್ರಜ್ಞಾನ ಉನ್ನತೀಕರಣಕ್ಕೆ ಶೇ 5-6% ಬಡ್ಡಿ ಸಹಾಯಧನ ನೀಡಲಾಗುತ್ತಿದೆ. ಹೊಸ ಕೈಗಾರಿಕಾ ನೀತಿಯಂತೆ ಹೊಸ ಬಂಡವಾಳ ಹೂಡಿಕೆಗೆ ಒಟ್ಟು ಸ್ಥಿರಾಸ್ತಿಯ 25% ರಿಂದ 35% ರಷ್ಟು ಗರಿಷ್ಠ ರೂ.1.05 ಕೋಟಿ ಬಂಡವಾಳ ಹೂಡಿಕೆಗೆ ಸಹಾಯಧನ ನೀಡಲಾಗುತ್ತಿದ್ದು, ಹೂಡಿಕೆಗೆ 75% ರಿಂದ 100% ಮುದ್ರಾಂಕ ಶುಲ್ಕ ವಿನಾಯಿತಿ ಮತ್ತು ನೋಂದಣಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್‍ನಲ್ಲಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದ್ದಾರೆ.


ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಕರಾವಳಿಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಹೆಂಚು ಉದ್ಯಮ ಕುಸಿತ ಕಂಡಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹೆಂಚು ಉದ್ಯಮದ ಪುನಶ್ಚೇತನಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು? ಹೆಂಚುಗಳ ಖರೀದಿ ಕ್ಷೀಣ, ಆವೆ ಮಣ್ಣಿನ ದರ ಹೆಚ್ಚಲ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಹೆಂಚು ಉದ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಖಾನೆಗಳು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಆರ್ಥಿಕವಾಗಿ ಹೆಚ್ಚಿನ ಪರಿಹಾರ ನೀಡಲು ಸರ್ಕಾರ ಕೈಗೊಂಡ ಕ್ರಮಗಳೇನು ಎಂದು ಕೇಳಿದ ಪ್ರಶ್ನಿಸಿದರು.


ಕಾರ್ಖಾನೆಗಳಿಗೆ ಭೂ ಪರಿವರ್ತನೆ ಶುಲ್ಕವನ್ನು ಶೇ.75 ರಿಂದ 100% ರಷ್ಟು ಮರುಪಾವತಿ ಮಾಡಲಾಗುತ್ತಿದ್ದು, ವಿದ್ಯುತ್ ತೆರಿಗೆ ವಿನಾಯಿತಿಯನ್ನು 100% ಗರಿಷ್ಠ 4 ರಿಂದ 8 ವರ್ಷಗಳವರೆಗೆ ನೀಡಲಾಗುತ್ತಿದೆ. ಸೂಕ್ಷ್ಮ ಮತ್ತು ಕೈಗಾರಿಕೆಗಳಿಗೆ ಅವು ಬಳಸಿದ ಪ್ರತಿ ಯುನಿಟ್ ಗೆ ರೂ.1 ರಂತೆ ವರ್ಷಗಳ ಕಾಲ ವಿದ್ಯುತ್ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

Related posts

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya
error: Content is protected !!