22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಜಿರೆ : ಮಂಗಳೂರಿನ ಶ್ರೀನಿವಾಸ ಯೂನಿವರ್ಸಿಟಿ ಹಾಗೂ ಸಮೂಹ ಸಂಸ್ಥೆಗಳ ಎ. ಶಾಮ ರಾವ್ ಪೌಂಡೇಶನ್ ವತಿಯಿಂದ ಸಂಸ್ಥಾಪಕರ ದಿನದ ಅಂಗವಾಗಿ ಕೊಡಮಾಡುವ ಎ. ಶಾಮ ರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಮಂಗಳೂರಿನ ಮುಕ್ಕದ ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಸ್ವೀಕರಿಸಿದರು.

ಶ್ರೀನಿವಾಸ ಯೂನಿವರ್ಸಿಟಿಯ ಕುಲಪತಿ ಸಿಎ. ರಾಘವೇಂದ್ರ ರಾವ್, ಉಪ ಕುಲಪತಿ ಶ್ರೀನಿವಾಸ ರಾವ್ , ಆಡಳಿತ ಮಂಡಳಿಯ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್ ರಾವ್ ಹಾಗೂ ಮಿತ್ರಾ ಎಸ್ ರಾವ್ , ಅತಿಥಿಗಳಾದ ಬೆಂಗಳೂರಿನ ರಾಜೀವ ಗಾಂಧಿ ಹೆಲ್ತ್ ಸೈನ್ಸ್ ಇದರ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ , ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಕಾರ್ಯ ನಿರ್ವಾಹಕ ನಿರ್ದೇಶಕ ಆಶಿಷ್ ಪಾಂಡೆ , ಮೌಲ್ಯಮಾಪನ ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ , ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಡಾ.ಎ.ಆರ್ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya
error: Content is protected !!