ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ವಿದ್ಯಾಭ್ಯಾಸ ಮುಗಿಸಿ E.S. ಆಸ್ಪತ್ರೆ ಬೆಂಗಳೂರು, ಆರೋಗ್ಯ ಕೇಂದ್ರ ಕೊಕ್ಕಡ, ಸಮುದಾಯ ಆರೋಗ್ಯ ಕೇಂದ್ರ ಬೆಳ್ತಂಗಡಿ ಮತ್ತು ಪ್ರಾಥಮಿಕ ಅರೋಗ್ಯ ಕೇಂದ್ರ, ವೇಣೂರು ಇಲ್ಲಿ ಸುಮಾರು 37 ವರ್ಷಗಳ ಕಾಲ ಬಡರೋಗಿಗಳ ಜೊತೆ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ವಿಜಯ ಕುಮಾರಿ ಕೆ ಇವರ ಸೇವೆಯನ್ನ ಗೌರವಿಸುತ್ತ ಫೆ. 12 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ನಡೆದ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಗುರುತಿಸಿ ಸನ್ಮಾನಿಸಲಾಯಿತು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಅಧ್ಯಕ್ಷರಾದ ಜೆಸಿ HGF ರಂಜಿತ್ ಎಚ್ ಡಿ ಯವರು ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮದಲ್ಲಿ ವಲಯದ ಉಪಾಧ್ಯಕ್ಷರಾದ JFM ಶಂಕರ್ ರಾವ್ ಬಿ, ಲೇಡಿ ಜೆಸಿ ಸಂಯೋಜಕರಾದ ಜೆಸಿ ಶ್ರುತಿ ರಂಜಿತ್, ಕಾರ್ಯಕ್ರಮದ ನಿರ್ದೇಶಕರಾದ ಜೆಸಿ ಪ್ರೀತಮ್ ಶೆಟ್ಟಿ, ಜೆಸಿ ಪ್ರಮೋದ್, ಘಟಕದ ಪೂರ್ವಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

ನಂತರ ಜೆಸಿ ಕುಟುಂಬ ಸದಸ್ಯರಿಗೆ “ಜೆಸಿ ಸಂಭ್ರಮ” ಕುಟುಂಬೋತ್ಸವ ಕಾರ್ಯಕ್ರಮವು ಘಟಕದ ಉಪಾಧ್ಯಕ್ಷರಾದ
ಪ್ರೀತಮ್ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ಜೆಸಿ ಸಚಿನ್ ಸಾಲಿಯಾನ್ ಇವರ ನಿರೂಪಣೆಯೊಂದಿಗೆ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ವೇದಿಕೆ ಅಹ್ವಾನವನ್ನು ಜೆಸಿ ರಜತ್, ಜೆಸಿ ವಾಣಿನ್ನು ಜೆಸಿ ರಾಮಕೃಷ್ಣ, ಹಾಗೂ ಸನ್ಮಾನ ಪತ್ರವನ್ನು ಜೆಸಿ ಮಾಮಿತಾ ಸುಧೀರ್ ವಾಚಿಸಿದರು. ಕಾರ್ಯದರ್ಶಿ ಜೆಸಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya
error: Content is protected !!