September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ


ತೆಕ್ಕಾರು, ಶ್ರೀ ನಾಭಿರಾಜ್ ಹೆಗ್ಡೆ ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮ ನಿವಾಸಿ ನಾಭಿರಾಜ್ ಹೆಗ್ಡೆ ಸಮಾಜ ಸೇವಾ ಚಟುವಟಿಕೆಗಳ 000pಮೂಲಕ ಜನಾನುರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಹಲವಾರು ಸಮಾಜಮುಖಿ ಚಟುವಟಿಕೆಗಳಲಿ ಭಾಗವಹಿಸುತಿದ್ದರು ತೆಕ್ಕಾರು ಯುವಕ ಮಂಡಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಟ್ಟಿಕಳ ಇದರ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಮಾದರಿರೀತಿಯಲ್ಲಿ ವಾರ್ಷಿಕೋತ್ಸವ ಆಯೋಜಿಸಿ ಶಿಕ್ಷಣ ಸಂಸ್ಥೆಗಳ ಪೋಷಕರಾಗಿದ್ದ ಇವರು ಬಿದ್ದುಕಲ್ಲು ಶ್ರೀ ಅದಿನಾತೇಶ್ವರ ಬಸದಿ, ತೆಕ್ಕಾರು ಇದರ ಅಧ್ಯಕ್ಷರಾಗಿ ಅಭಿವೃದ್ಧಿ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಮೂಲತ ನಾರಾವಿಯ .. ತೆಕ್ಕಾರು ಮರಮ ಅನಂತಯ್ಯ ಕೊಂಡೆಯವರ ಪುತ್ರಿಯನ್ನು ವಿವಾಹವಾಗಿ ಮರಮದಲ್ಲೆ ನೆಲೆಸಿ ಪ್ರಗತಿಪರ ಕೃಷಿಕರಾಗಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಜವರ್ಮ ಜೈನ್, ಸಹೋದರ ಬೆಳ್ತಂಗಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಶ್ರೀ ವಿನಯ ಹೆಗ್ಡೆ, ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ, ಉಪ್ಪಿನಂಗಡಿಯ ಸಾಮಾಜಿಕ ಮುಂದಾಳು ಮಹೇಂದ್ರ ವರ್ಮ, ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ ಪೂಜಾರಿ, ಟ್ರಸ್ಟಿಗಳಾದ ಮಂಜುನಾಥ್ ಸಾಲ್ಯಾನ್, ರವೀಂದ್ರ ಪಿಲಿಬೈಲ್, ಸತೀಶ್ ಹೊಸ ಮುಗ್ರು ಹಾಗೂ ತೆಕ್ಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್, ನಿರ್ದೇಶಕರು , ಸಿಬ್ಬಂದಿ ವರ್ಗ ಹಾಗೂ ಕುಟುಂಬ ವರ್ಗ ಮತ್ತು ಗ್ರಾಮಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!