22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ


ತೆಕ್ಕಾರು, ಶ್ರೀ ನಾಭಿರಾಜ್ ಹೆಗ್ಡೆ ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮ ನಿವಾಸಿ ನಾಭಿರಾಜ್ ಹೆಗ್ಡೆ ಸಮಾಜ ಸೇವಾ ಚಟುವಟಿಕೆಗಳ 000pಮೂಲಕ ಜನಾನುರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಹಲವಾರು ಸಮಾಜಮುಖಿ ಚಟುವಟಿಕೆಗಳಲಿ ಭಾಗವಹಿಸುತಿದ್ದರು ತೆಕ್ಕಾರು ಯುವಕ ಮಂಡಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಟ್ಟಿಕಳ ಇದರ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಮಾದರಿರೀತಿಯಲ್ಲಿ ವಾರ್ಷಿಕೋತ್ಸವ ಆಯೋಜಿಸಿ ಶಿಕ್ಷಣ ಸಂಸ್ಥೆಗಳ ಪೋಷಕರಾಗಿದ್ದ ಇವರು ಬಿದ್ದುಕಲ್ಲು ಶ್ರೀ ಅದಿನಾತೇಶ್ವರ ಬಸದಿ, ತೆಕ್ಕಾರು ಇದರ ಅಧ್ಯಕ್ಷರಾಗಿ ಅಭಿವೃದ್ಧಿ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಮೂಲತ ನಾರಾವಿಯ .. ತೆಕ್ಕಾರು ಮರಮ ಅನಂತಯ್ಯ ಕೊಂಡೆಯವರ ಪುತ್ರಿಯನ್ನು ವಿವಾಹವಾಗಿ ಮರಮದಲ್ಲೆ ನೆಲೆಸಿ ಪ್ರಗತಿಪರ ಕೃಷಿಕರಾಗಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಜವರ್ಮ ಜೈನ್, ಸಹೋದರ ಬೆಳ್ತಂಗಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಶ್ರೀ ವಿನಯ ಹೆಗ್ಡೆ, ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ, ಉಪ್ಪಿನಂಗಡಿಯ ಸಾಮಾಜಿಕ ಮುಂದಾಳು ಮಹೇಂದ್ರ ವರ್ಮ, ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ ಪೂಜಾರಿ, ಟ್ರಸ್ಟಿಗಳಾದ ಮಂಜುನಾಥ್ ಸಾಲ್ಯಾನ್, ರವೀಂದ್ರ ಪಿಲಿಬೈಲ್, ಸತೀಶ್ ಹೊಸ ಮುಗ್ರು ಹಾಗೂ ತೆಕ್ಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್, ನಿರ್ದೇಶಕರು , ಸಿಬ್ಬಂದಿ ವರ್ಗ ಹಾಗೂ ಕುಟುಂಬ ವರ್ಗ ಮತ್ತು ಗ್ರಾಮಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!