ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ.

ಹಿಟ್ನಾಳ್ ಗ್ರಾಮ, ಕೊಪ್ಪಳ ನಿವಾಸಿ ಬಸವರಾಜ್,ಎಸ್, ಎಂಬುವರು ನೀಡಿದ ದೂರಿನಂತೆ, ಫೆ.14 ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ತನ್ನ KA-05-HJ-7954 ನೇ ನೋಂದಣಿ ಸಂಖ್ಯೆಯ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ನಿಲ್ಲಿಸಿದ್ದು, ಮರುದಿನ ಫೆ.15 ರಂದು ಬೆಳಿಗ್ಗೆ ನೋಡಿದಾಗ ಮೋಟಾರ್‌ ಸೈಕಲ್‌ ಕಾಣದಿದ್ದು, ಸದ್ರಿ ಪರಿಸರದಲ್ಲಿ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ. ಆದ್ದರಿಂದ ಅಂದಾಜು ರೂ 150000/-ಮೌಲ್ಯದ ಸದ್ರಿ ಮೋಟರ್ ಸೈಕಲನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 08/2024 ಕಲಂ: 379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya
error: Content is protected !!