22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಪೋಷಕರ ಸಭೆಯು ಶಾಲಾ ಮುಖ್ಯ ಶಿಕ್ಷಕರ ಅಧ್ಯಕ್ಷತೆಯಲ್ಲಿ ನಡೆಯಿತು.


ಸಭೆಯಲ್ಲಿ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಇವರು ಮಕ್ಕಳಿಗೆ ಮನೆಯಿಂದಲೇ ಶಿಕ್ಷಣ ನೀಡಬೇಕು. ಪ್ರತಿ ದಿನ ಶಾಲೆಯಲ್ಲಿ ನಡೆಯುವ ಚಟುವಟಿಕೆಗಳನ್ನು ಮಕ್ಕಳಿಂದ ಕೇಳಿ ತಿಳಿದುಕೊಳ್ಳಬೇಕು. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಆ ನಿಟ್ಟಿನಲ್ಲಿ ಅವನಿಗೆ ಪ್ರೋತ್ಸಾಹ ನೀಡಿದಾಗ ಅವನ ಪ್ರಗತಿ ಸಾಧ್ಯ. ಜೀವನ ಮೌಲ್ಯಗಳನ್ನು ಅರಿತು ಸಮಾಜದಲ್ಲಿ ಬದುಕಲು ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸಿಕೊಳ್ಳಲು ನಮ್ಮ ಜೊತೆಗೆ ಪೋಷಕರು ಸಹಕರಿಸಬೇಕಾಗಿದೆ. ಮಕ್ಕಳು ನಮಗೆ ಕನ್ನಡಿ ಇದ್ದ ಹಾಗೆ. ಆದ್ದರಿಂದ ಮಕ್ಕಳನ್ನು ಸರಿಯಾದ ರೀತಿಯಲ್ಲಿ ಗಮನಿಸಿ ಎಂದರು.


ಇದಕ್ಕೆ ಪೂರಕವಾಗಿ ಶ್ರೀ ಧ ಮ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮವಾದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ದೊರೆಯುತ್ತಿದೆ ಎಂದು ಪೋಷಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಶ್ರೀಮತಿ ಶ್ರೀಜಾ ಇವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಪೂರ್ಣಿಮಾ ಜೋಷಿ ವಂದಿಸಿದರು.
ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya
error: Content is protected !!