July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಚೊಚ್ಚಲ 15 ನೇ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ, ಮುಖ್ಯವಾಗಿ ಕೃಷಿ ,ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿ ಜನಸಾಮಾನ್ಯರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 2024-25 ರಲ್ಲಿ ಗ್ಯಾರಂಟಿಗಳಿಗೆ ರೂ 52,000 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದು ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ಸಾವಿರದಿಂದ 55 ಸಾವಿರವನ್ನು ಒದಗಿಸುತ್ತಿದೆ. ಇದು ಒಂದು ಜಾಗತಿಕ ದಾಖಲೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 9 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆ ಜೊತೆಗೆ ಸುಮಾರು 21,168 ಕೋಟಿ ರೂ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮೋದನೆಗೊಂಡ 2230 ಕೋಟಿ ರೂಗಳ ಕಾಮಗಾರಿ ಯೋಜನೆಗೂ ಅನುಮೋದನೆ ನೀಡಿದೆ ಸರ್ಕಾರ. ಅಭಿವೃದ್ಧಿಯಲ್ಲಿ ಯಾವ ರಾಜಕಾರಣ ಇಲ್ಲಾ ಎಂಬುದು ಬಹಳ ಸ್ಪಷ್ಟವಾಗಿದೆ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟನ್ನು ರಾಜ್ಯದ ಸಮಸ್ತ ಜನರಿಗೆ ನೀಡಿದೆ ಎಂದು ತಿಳಿಸಿದ್ದಾರೆ.

Related posts

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!