ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಚೊಚ್ಚಲ 15 ನೇ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ, ಮುಖ್ಯವಾಗಿ ಕೃಷಿ ,ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿ ಜನಸಾಮಾನ್ಯರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 2024-25 ರಲ್ಲಿ ಗ್ಯಾರಂಟಿಗಳಿಗೆ ರೂ 52,000 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದು ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ಸಾವಿರದಿಂದ 55 ಸಾವಿರವನ್ನು ಒದಗಿಸುತ್ತಿದೆ. ಇದು ಒಂದು ಜಾಗತಿಕ ದಾಖಲೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 9 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆ ಜೊತೆಗೆ ಸುಮಾರು 21,168 ಕೋಟಿ ರೂ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮೋದನೆಗೊಂಡ 2230 ಕೋಟಿ ರೂಗಳ ಕಾಮಗಾರಿ ಯೋಜನೆಗೂ ಅನುಮೋದನೆ ನೀಡಿದೆ ಸರ್ಕಾರ. ಅಭಿವೃದ್ಧಿಯಲ್ಲಿ ಯಾವ ರಾಜಕಾರಣ ಇಲ್ಲಾ ಎಂಬುದು ಬಹಳ ಸ್ಪಷ್ಟವಾಗಿದೆ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟನ್ನು ರಾಜ್ಯದ ಸಮಸ್ತ ಜನರಿಗೆ ನೀಡಿದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!