July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ : ಕೈಗಾರಿಕಾ ನೀತಿ 2020-25 ರಲ್ಲಿ ತಂತ್ರಜ್ಞಾನ ಉನ್ನತೀಕರಣಕ್ಕೆ ಶೇ 5-6% ಬಡ್ಡಿ ಸಹಾಯಧನ ನೀಡಲಾಗುತ್ತಿದೆ. ಹೊಸ ಕೈಗಾರಿಕಾ ನೀತಿಯಂತೆ ಹೊಸ ಬಂಡವಾಳ ಹೂಡಿಕೆಗೆ ಒಟ್ಟು ಸ್ಥಿರಾಸ್ತಿಯ 25% ರಿಂದ 35% ರಷ್ಟು ಗರಿಷ್ಠ ರೂ.1.05 ಕೋಟಿ ಬಂಡವಾಳ ಹೂಡಿಕೆಗೆ ಸಹಾಯಧನ ನೀಡಲಾಗುತ್ತಿದ್ದು, ಹೂಡಿಕೆಗೆ 75% ರಿಂದ 100% ಮುದ್ರಾಂಕ ಶುಲ್ಕ ವಿನಾಯಿತಿ ಮತ್ತು ನೋಂದಣಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್‍ನಲ್ಲಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದ್ದಾರೆ.


ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಕರಾವಳಿಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಹೆಂಚು ಉದ್ಯಮ ಕುಸಿತ ಕಂಡಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹೆಂಚು ಉದ್ಯಮದ ಪುನಶ್ಚೇತನಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು? ಹೆಂಚುಗಳ ಖರೀದಿ ಕ್ಷೀಣ, ಆವೆ ಮಣ್ಣಿನ ದರ ಹೆಚ್ಚಲ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಹೆಂಚು ಉದ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಖಾನೆಗಳು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಆರ್ಥಿಕವಾಗಿ ಹೆಚ್ಚಿನ ಪರಿಹಾರ ನೀಡಲು ಸರ್ಕಾರ ಕೈಗೊಂಡ ಕ್ರಮಗಳೇನು ಎಂದು ಕೇಳಿದ ಪ್ರಶ್ನಿಸಿದರು.


ಕಾರ್ಖಾನೆಗಳಿಗೆ ಭೂ ಪರಿವರ್ತನೆ ಶುಲ್ಕವನ್ನು ಶೇ.75 ರಿಂದ 100% ರಷ್ಟು ಮರುಪಾವತಿ ಮಾಡಲಾಗುತ್ತಿದ್ದು, ವಿದ್ಯುತ್ ತೆರಿಗೆ ವಿನಾಯಿತಿಯನ್ನು 100% ಗರಿಷ್ಠ 4 ರಿಂದ 8 ವರ್ಷಗಳವರೆಗೆ ನೀಡಲಾಗುತ್ತಿದೆ. ಸೂಕ್ಷ್ಮ ಮತ್ತು ಕೈಗಾರಿಕೆಗಳಿಗೆ ಅವು ಬಳಸಿದ ಪ್ರತಿ ಯುನಿಟ್ ಗೆ ರೂ.1 ರಂತೆ ವರ್ಷಗಳ ಕಾಲ ವಿದ್ಯುತ್ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

Related posts

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!