ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ : ಕೈಗಾರಿಕಾ ನೀತಿ 2020-25 ರಲ್ಲಿ ತಂತ್ರಜ್ಞಾನ ಉನ್ನತೀಕರಣಕ್ಕೆ ಶೇ 5-6% ಬಡ್ಡಿ ಸಹಾಯಧನ ನೀಡಲಾಗುತ್ತಿದೆ. ಹೊಸ ಕೈಗಾರಿಕಾ ನೀತಿಯಂತೆ ಹೊಸ ಬಂಡವಾಳ ಹೂಡಿಕೆಗೆ ಒಟ್ಟು ಸ್ಥಿರಾಸ್ತಿಯ 25% ರಿಂದ 35% ರಷ್ಟು ಗರಿಷ್ಠ ರೂ.1.05 ಕೋಟಿ ಬಂಡವಾಳ ಹೂಡಿಕೆಗೆ ಸಹಾಯಧನ ನೀಡಲಾಗುತ್ತಿದ್ದು, ಹೂಡಿಕೆಗೆ 75% ರಿಂದ 100% ಮುದ್ರಾಂಕ ಶುಲ್ಕ ವಿನಾಯಿತಿ ಮತ್ತು ನೋಂದಣಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್‍ನಲ್ಲಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದ್ದಾರೆ.


ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಕರಾವಳಿಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಹೆಂಚು ಉದ್ಯಮ ಕುಸಿತ ಕಂಡಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹೆಂಚು ಉದ್ಯಮದ ಪುನಶ್ಚೇತನಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು? ಹೆಂಚುಗಳ ಖರೀದಿ ಕ್ಷೀಣ, ಆವೆ ಮಣ್ಣಿನ ದರ ಹೆಚ್ಚಲ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಹೆಂಚು ಉದ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಖಾನೆಗಳು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಆರ್ಥಿಕವಾಗಿ ಹೆಚ್ಚಿನ ಪರಿಹಾರ ನೀಡಲು ಸರ್ಕಾರ ಕೈಗೊಂಡ ಕ್ರಮಗಳೇನು ಎಂದು ಕೇಳಿದ ಪ್ರಶ್ನಿಸಿದರು.


ಕಾರ್ಖಾನೆಗಳಿಗೆ ಭೂ ಪರಿವರ್ತನೆ ಶುಲ್ಕವನ್ನು ಶೇ.75 ರಿಂದ 100% ರಷ್ಟು ಮರುಪಾವತಿ ಮಾಡಲಾಗುತ್ತಿದ್ದು, ವಿದ್ಯುತ್ ತೆರಿಗೆ ವಿನಾಯಿತಿಯನ್ನು 100% ಗರಿಷ್ಠ 4 ರಿಂದ 8 ವರ್ಷಗಳವರೆಗೆ ನೀಡಲಾಗುತ್ತಿದೆ. ಸೂಕ್ಷ್ಮ ಮತ್ತು ಕೈಗಾರಿಕೆಗಳಿಗೆ ಅವು ಬಳಸಿದ ಪ್ರತಿ ಯುನಿಟ್ ಗೆ ರೂ.1 ರಂತೆ ವರ್ಷಗಳ ಕಾಲ ವಿದ್ಯುತ್ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

Related posts

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya
error: Content is protected !!