25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಜೆಟ್ ಭಾಷಣದ ನೆಪದಲ್ಲಿ ಶಾಸನ ಸಭೆಯನ್ನು ಮುಖ್ಯಮಂತ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು 2024-25ನೇ ಸಾಲಿನ ಮುಂಗಡ ಪತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ.


ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ಆದೋಗತಿಗೆ ತಳ್ಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಗಡ ಪತ್ರ ಮಂಡಿಸುವ ಸಮಯದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಲೆಂದೇ ಸದನದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ. ಅಂದಾಜು ಏಳು ಕೋಟಿ ಜನಸಂಖ್ಯೆ ಹೊಂದಿರುವ ರಾಜ್ಯದ ಜನತೆಗೆ ಸಮಾನವಾಗಿ ಕೊಡುಗೆ ನೀಡಬೇಕಾಗಿದ್ದ ಸರ್ಕಾರ ಇಲ್ಲಿ ಅಲ್ಪ ಸಂಖ್ಯಾತರನ್ನು ತುಷ್ಟೀಕರಿಸಲು ಬಹುಪಾಲು ಅನುದಾನ ಅವರಿಗೆ ಮೀಸಲಿರಿಸಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಕರಾವಳಿ ಜಿಲ್ಲೆಯ ಜನತೆಗೆ ಏನೂ ಉಪಯೋಗವಾಗದ ಮುಂಗಡ ಪತ್ರವಾಗಿದ್ದು ಹಳದಿ ರೋಗದಿಂದ ಸಂಕಷ್ಟಗೊಳಗಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನಿರೀಕ್ಷೆ ಹುಸಿಯಾಗಿದೆ. ನೀರಾವರಿ, ಶಿಕ್ಷಣ ಇಲಾಖೆಗಳನ್ನು ಕಡೆಗಣಿಸಲಾಗಿದ್ದು ಎಲ್ಲಕ್ಕಿಂತ ಮಿಗಿಲಾಗಿ ಮೂಲ ಸೌಕರ್ಯವಲಯ ಕುಂಠಿತವಾಗುವ ಲಕ್ಷಣಗಳಿವೆ. 52 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ ಮೀಸಲಿಡುವ ಸರ್ಕಸ್‌ನಿಂದಾಗಿ ರಾಜಸ್ವ ಕೊರತೆ ವಿತ್ತೀಯ ಕೊರತೆ ಅಪಾಯ ಮಟ್ಟವನ್ನು ದಾಟಿ ರಾಜ್ಯದ ಆರ್ಥಿಕ ಸ್ಥಿತಿ ಹದೆಗೆಡುವ ಕಳವಳವನ್ನು ಪತ್ರಿಕಾ ಪ್ರಕಟಣೆ ಮೂಲಕ ಶಾಸಕ ಹರೀಶ್ ಪೂಂಜ ವ್ಯಕ್ತಪಡಿಸಿದ್ದಾರೆ.

Related posts

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!