25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಜೆಟ್ ಭಾಷಣದ ನೆಪದಲ್ಲಿ ಶಾಸನ ಸಭೆಯನ್ನು ಮುಖ್ಯಮಂತ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು 2024-25ನೇ ಸಾಲಿನ ಮುಂಗಡ ಪತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ.


ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ಆದೋಗತಿಗೆ ತಳ್ಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಗಡ ಪತ್ರ ಮಂಡಿಸುವ ಸಮಯದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಲೆಂದೇ ಸದನದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ. ಅಂದಾಜು ಏಳು ಕೋಟಿ ಜನಸಂಖ್ಯೆ ಹೊಂದಿರುವ ರಾಜ್ಯದ ಜನತೆಗೆ ಸಮಾನವಾಗಿ ಕೊಡುಗೆ ನೀಡಬೇಕಾಗಿದ್ದ ಸರ್ಕಾರ ಇಲ್ಲಿ ಅಲ್ಪ ಸಂಖ್ಯಾತರನ್ನು ತುಷ್ಟೀಕರಿಸಲು ಬಹುಪಾಲು ಅನುದಾನ ಅವರಿಗೆ ಮೀಸಲಿರಿಸಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಕರಾವಳಿ ಜಿಲ್ಲೆಯ ಜನತೆಗೆ ಏನೂ ಉಪಯೋಗವಾಗದ ಮುಂಗಡ ಪತ್ರವಾಗಿದ್ದು ಹಳದಿ ರೋಗದಿಂದ ಸಂಕಷ್ಟಗೊಳಗಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನಿರೀಕ್ಷೆ ಹುಸಿಯಾಗಿದೆ. ನೀರಾವರಿ, ಶಿಕ್ಷಣ ಇಲಾಖೆಗಳನ್ನು ಕಡೆಗಣಿಸಲಾಗಿದ್ದು ಎಲ್ಲಕ್ಕಿಂತ ಮಿಗಿಲಾಗಿ ಮೂಲ ಸೌಕರ್ಯವಲಯ ಕುಂಠಿತವಾಗುವ ಲಕ್ಷಣಗಳಿವೆ. 52 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ ಮೀಸಲಿಡುವ ಸರ್ಕಸ್‌ನಿಂದಾಗಿ ರಾಜಸ್ವ ಕೊರತೆ ವಿತ್ತೀಯ ಕೊರತೆ ಅಪಾಯ ಮಟ್ಟವನ್ನು ದಾಟಿ ರಾಜ್ಯದ ಆರ್ಥಿಕ ಸ್ಥಿತಿ ಹದೆಗೆಡುವ ಕಳವಳವನ್ನು ಪತ್ರಿಕಾ ಪ್ರಕಟಣೆ ಮೂಲಕ ಶಾಸಕ ಹರೀಶ್ ಪೂಂಜ ವ್ಯಕ್ತಪಡಿಸಿದ್ದಾರೆ.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!