22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಜೆಟ್ ಭಾಷಣದ ನೆಪದಲ್ಲಿ ಶಾಸನ ಸಭೆಯನ್ನು ಮುಖ್ಯಮಂತ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು 2024-25ನೇ ಸಾಲಿನ ಮುಂಗಡ ಪತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ.


ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ಆದೋಗತಿಗೆ ತಳ್ಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಗಡ ಪತ್ರ ಮಂಡಿಸುವ ಸಮಯದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಲೆಂದೇ ಸದನದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ. ಅಂದಾಜು ಏಳು ಕೋಟಿ ಜನಸಂಖ್ಯೆ ಹೊಂದಿರುವ ರಾಜ್ಯದ ಜನತೆಗೆ ಸಮಾನವಾಗಿ ಕೊಡುಗೆ ನೀಡಬೇಕಾಗಿದ್ದ ಸರ್ಕಾರ ಇಲ್ಲಿ ಅಲ್ಪ ಸಂಖ್ಯಾತರನ್ನು ತುಷ್ಟೀಕರಿಸಲು ಬಹುಪಾಲು ಅನುದಾನ ಅವರಿಗೆ ಮೀಸಲಿರಿಸಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಕರಾವಳಿ ಜಿಲ್ಲೆಯ ಜನತೆಗೆ ಏನೂ ಉಪಯೋಗವಾಗದ ಮುಂಗಡ ಪತ್ರವಾಗಿದ್ದು ಹಳದಿ ರೋಗದಿಂದ ಸಂಕಷ್ಟಗೊಳಗಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನಿರೀಕ್ಷೆ ಹುಸಿಯಾಗಿದೆ. ನೀರಾವರಿ, ಶಿಕ್ಷಣ ಇಲಾಖೆಗಳನ್ನು ಕಡೆಗಣಿಸಲಾಗಿದ್ದು ಎಲ್ಲಕ್ಕಿಂತ ಮಿಗಿಲಾಗಿ ಮೂಲ ಸೌಕರ್ಯವಲಯ ಕುಂಠಿತವಾಗುವ ಲಕ್ಷಣಗಳಿವೆ. 52 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ ಮೀಸಲಿಡುವ ಸರ್ಕಸ್‌ನಿಂದಾಗಿ ರಾಜಸ್ವ ಕೊರತೆ ವಿತ್ತೀಯ ಕೊರತೆ ಅಪಾಯ ಮಟ್ಟವನ್ನು ದಾಟಿ ರಾಜ್ಯದ ಆರ್ಥಿಕ ಸ್ಥಿತಿ ಹದೆಗೆಡುವ ಕಳವಳವನ್ನು ಪತ್ರಿಕಾ ಪ್ರಕಟಣೆ ಮೂಲಕ ಶಾಸಕ ಹರೀಶ್ ಪೂಂಜ ವ್ಯಕ್ತಪಡಿಸಿದ್ದಾರೆ.

Related posts

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya
error: Content is protected !!