September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಜೆಟ್ ಭಾಷಣದ ನೆಪದಲ್ಲಿ ಶಾಸನ ಸಭೆಯನ್ನು ಮುಖ್ಯಮಂತ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು 2024-25ನೇ ಸಾಲಿನ ಮುಂಗಡ ಪತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ.


ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ಆದೋಗತಿಗೆ ತಳ್ಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಗಡ ಪತ್ರ ಮಂಡಿಸುವ ಸಮಯದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಲೆಂದೇ ಸದನದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ. ಅಂದಾಜು ಏಳು ಕೋಟಿ ಜನಸಂಖ್ಯೆ ಹೊಂದಿರುವ ರಾಜ್ಯದ ಜನತೆಗೆ ಸಮಾನವಾಗಿ ಕೊಡುಗೆ ನೀಡಬೇಕಾಗಿದ್ದ ಸರ್ಕಾರ ಇಲ್ಲಿ ಅಲ್ಪ ಸಂಖ್ಯಾತರನ್ನು ತುಷ್ಟೀಕರಿಸಲು ಬಹುಪಾಲು ಅನುದಾನ ಅವರಿಗೆ ಮೀಸಲಿರಿಸಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಕರಾವಳಿ ಜಿಲ್ಲೆಯ ಜನತೆಗೆ ಏನೂ ಉಪಯೋಗವಾಗದ ಮುಂಗಡ ಪತ್ರವಾಗಿದ್ದು ಹಳದಿ ರೋಗದಿಂದ ಸಂಕಷ್ಟಗೊಳಗಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನಿರೀಕ್ಷೆ ಹುಸಿಯಾಗಿದೆ. ನೀರಾವರಿ, ಶಿಕ್ಷಣ ಇಲಾಖೆಗಳನ್ನು ಕಡೆಗಣಿಸಲಾಗಿದ್ದು ಎಲ್ಲಕ್ಕಿಂತ ಮಿಗಿಲಾಗಿ ಮೂಲ ಸೌಕರ್ಯವಲಯ ಕುಂಠಿತವಾಗುವ ಲಕ್ಷಣಗಳಿವೆ. 52 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ ಮೀಸಲಿಡುವ ಸರ್ಕಸ್‌ನಿಂದಾಗಿ ರಾಜಸ್ವ ಕೊರತೆ ವಿತ್ತೀಯ ಕೊರತೆ ಅಪಾಯ ಮಟ್ಟವನ್ನು ದಾಟಿ ರಾಜ್ಯದ ಆರ್ಥಿಕ ಸ್ಥಿತಿ ಹದೆಗೆಡುವ ಕಳವಳವನ್ನು ಪತ್ರಿಕಾ ಪ್ರಕಟಣೆ ಮೂಲಕ ಶಾಸಕ ಹರೀಶ್ ಪೂಂಜ ವ್ಯಕ್ತಪಡಿಸಿದ್ದಾರೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya
error: Content is protected !!