July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್, ಅಭಿವೃದ್ಧಿ ವಿರೋಧಿ ಬಜೆಟ್ ಎಂದು ಬಿಜೆಪಿ ಸದಸ್ಯರು ವಿಧಾನಸೌಧ ದ್ವಾರದ ಎದುರು ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ಬಜೆಟ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಶಾಸಕರು ಬಳಿಕ ವಿಧಾನಸಭೆ ಪ್ರವೇಶದ್ವಾರದ ಬಳಿ ಆಗಮಿಸಿ ಪ್ರತಿಭಟನೆ ನಡೆಸಿ ಬಜೆಟ್ ‘ಅಭಿವೃದ್ಧಿ’ ವಿರೋಧಿಯಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಿಡಿದ “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಭಿತ್ತಿಪತ್ರ ಗಮನ ಸೆಳೆದಿದೆ.

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕೋಟಿ ರೂಪಾಯಿ ಅನುದಾನಗಳ ಜೊತೆಗೆ ವಸತಿ ಶಾಲೆ, ಕಡಿಮೆ ಬಡ್ಡಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಜೊತೆಗೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸಭೆ ಪ್ರವೇಶದ್ವಾರದ ಬಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಭಿತ್ತಿಪತ್ರ ಗಮನ ಸೆಳೆದಿದೆ.

Related posts

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya
error: Content is protected !!