September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್, ಅಭಿವೃದ್ಧಿ ವಿರೋಧಿ ಬಜೆಟ್ ಎಂದು ಬಿಜೆಪಿ ಸದಸ್ಯರು ವಿಧಾನಸೌಧ ದ್ವಾರದ ಎದುರು ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ಬಜೆಟ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಶಾಸಕರು ಬಳಿಕ ವಿಧಾನಸಭೆ ಪ್ರವೇಶದ್ವಾರದ ಬಳಿ ಆಗಮಿಸಿ ಪ್ರತಿಭಟನೆ ನಡೆಸಿ ಬಜೆಟ್ ‘ಅಭಿವೃದ್ಧಿ’ ವಿರೋಧಿಯಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಿಡಿದ “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಭಿತ್ತಿಪತ್ರ ಗಮನ ಸೆಳೆದಿದೆ.

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕೋಟಿ ರೂಪಾಯಿ ಅನುದಾನಗಳ ಜೊತೆಗೆ ವಸತಿ ಶಾಲೆ, ಕಡಿಮೆ ಬಡ್ಡಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಜೊತೆಗೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸಭೆ ಪ್ರವೇಶದ್ವಾರದ ಬಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಭಿತ್ತಿಪತ್ರ ಗಮನ ಸೆಳೆದಿದೆ.

Related posts

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರವೀಣ್‌ ವಿ.ಜಿ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya
error: Content is protected !!