ನಿಡ್ಲೆ : ರಾಜ್ಯ ಸರಕಾರ ಜಿಲ್ಲಾ ಆಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ನಿಡ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ. 16 ರಂದು ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಗ್ರಾಮಕ್ಕೆ ಆಗಮಿಸಿದ ರಥವನ್ನು ಬರೆಂಗಾಯ ಎಂಬಲ್ಲಿ ಸ್ವಾಗತಿಸಿ ಬೈಕ್ ಜಾಥಾ ಹಾಗೂ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದ ಶಾಲಾ ಮಕ್ಕಳು ಬ್ಯಾಂಡ್ ವಾದ್ಯಗಳೊಂದಿಗೆ ಗ್ರಾಮ ಪಂಚಾಯತ್ ಕಛೇರಿವರೆಗೆ ಜಾಥ ಮೂಲಕ ಕರೆತರಲಾಯಿತು.

ಸಂವಿಧಾನ ಜಾಥಾ ರಥದ ಮಹತ್ವವನ್ನು ಸೇರಿದ ವೀಕ್ಷಕರಿಗೆ ವಿವರಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖಾಧಿಕಾರಿಗಳು, ಮಹಿಳಾ ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ, ಬೆಳ್ತಂಗಡಿ ತಾಲೂಕು ಪಂಚಾಯತ್ ನ ವಿನಿಷಾ ರವರು ಭಾಗವಹಿಸಿದ್ದರು.
ಪಂಚಾಯತ್ ಅಭಿವೃಧ್ಧಿ ಅಧಿಕಾರಿಯವರು ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಲತಾ ಸಂವಿಧಾನ ಪ್ರತಿಜ್ಞಾ ವಿಧಿ ಬೋದಿಸಿದರು, ಪಂಚಾಯತ್ ಕಾರ್ಯದರ್ಶಿ ಕೆ.ಪಿ. ಕೇಶವ ಗೌಡ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.











