25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.15 ರಿಂದ ಪ್ರಾರಂಭಗೊಂಡು ಫೆ.22 ರವರೆಗೆ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಇದರ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಫೆ.16 ರಂದು ನಡೆಯಿತು.

ಕುಪ್ಪೆಟ್ಟಿ ಶ್ರೀ ಗಣೇಶ್ ಭಜನಾ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ದೀಪ ಬೆಳಗಿಸಿ ನಂತರ ಕುಪ್ಪೆಟ್ಟಿ ಮಹಾಧ್ವಾರದಿಂದ ಹಸಿರು ಕಾಣಿಕೆ ಮೆರವಣಿಗೆಯ ಜೊತೆಗೆ ದೈವ ದೇವರ ಆಭರಣ ವೈಭವಯುತ ಭವ್ಯ ಮೆರವಣಿಗೆಯಲ್ಲಿ ಸಾಗಿತು.

ಹೊರೆಕಾಣಿಕೆಯಲ್ಲಿ ಉರುವಾಲು, ಕಣಿಯೂರು, ಬಂದಾರು, ಮೊಗ್ರು, ಇಳಂತಿಲ, ಕರಾಯ, ತಣ್ಣೀರುಪಂತ, ಬಾರ್ಯ, ತೆಕ್ಕಾರು, ಪುತ್ತಿಲ, ನಾಳ, ಮಚ್ಚಿನ ಮತ್ತು ಉಪ್ಪಿನಂಗಡಿ ವಿವಿಧ ಭಾಗದಿಂದ ಗ್ರಾಮಸ್ಥರು ಹೊರೆಕಾಣಿಕೆ ಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿಆಡಳಿತ ಮೊಕ್ತೇಸರ ಯೋಗಿಸ್ ಪೂಜಾರಿ ಕಡ್ತಿಲ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್‌ ಗೌಡ ಅಣವು, ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಭಟ್ ವಾದ್ಯಕೋಡಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಉದಯ ಟಿ. ತಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಆಡಳಿತ ಸಹ ಮೊಕ್ತಸರ ಸೇಸಪ್ಪ ರೈ ಮತ್ತು ಜನಾರ್ದನ ಗೌಡ ನಕಾಲು ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಪೊಸದೊಂಡಿ, ಜೊತೆ ಕಾರ್ಯದರ್ಶಿ ಗಣೇಶ್ ಬನಾರಿ, ಕಾರ್ಯಯಾಲ ಸಂಚಾಲಕ ವಾರಿಜ ಶೆಟ್ಟಿ, ವಿವಿಧ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya
error: Content is protected !!