September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಜಿರೆ : ಮಂಗಳೂರಿನ ಶ್ರೀನಿವಾಸ ಯೂನಿವರ್ಸಿಟಿ ಹಾಗೂ ಸಮೂಹ ಸಂಸ್ಥೆಗಳ ಎ. ಶಾಮ ರಾವ್ ಪೌಂಡೇಶನ್ ವತಿಯಿಂದ ಸಂಸ್ಥಾಪಕರ ದಿನದ ಅಂಗವಾಗಿ ಕೊಡಮಾಡುವ ಎ. ಶಾಮ ರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಮಂಗಳೂರಿನ ಮುಕ್ಕದ ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಸ್ವೀಕರಿಸಿದರು.

ಶ್ರೀನಿವಾಸ ಯೂನಿವರ್ಸಿಟಿಯ ಕುಲಪತಿ ಸಿಎ. ರಾಘವೇಂದ್ರ ರಾವ್, ಉಪ ಕುಲಪತಿ ಶ್ರೀನಿವಾಸ ರಾವ್ , ಆಡಳಿತ ಮಂಡಳಿಯ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್ ರಾವ್ ಹಾಗೂ ಮಿತ್ರಾ ಎಸ್ ರಾವ್ , ಅತಿಥಿಗಳಾದ ಬೆಂಗಳೂರಿನ ರಾಜೀವ ಗಾಂಧಿ ಹೆಲ್ತ್ ಸೈನ್ಸ್ ಇದರ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ , ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಕಾರ್ಯ ನಿರ್ವಾಹಕ ನಿರ್ದೇಶಕ ಆಶಿಷ್ ಪಾಂಡೆ , ಮೌಲ್ಯಮಾಪನ ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ , ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಡಾ.ಎ.ಆರ್ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಉಜಿರೆ ಎಸ್.ಡಿ.ಎಂ ಪಪೂ ಕಾಲೇಜಿನಲ್ಲಿ 15 ಕ್ಕೂ ಹೆಚ್ಚಿನ ವಿಭಾಗಗಳ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ತೆಕ್ಕಾರಿನ ಗುರುಕಿರಣ್ ಆಯ್ಕೆ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!