23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ವಿದ್ಯಾಭ್ಯಾಸ ಮುಗಿಸಿ E.S. ಆಸ್ಪತ್ರೆ ಬೆಂಗಳೂರು, ಆರೋಗ್ಯ ಕೇಂದ್ರ ಕೊಕ್ಕಡ, ಸಮುದಾಯ ಆರೋಗ್ಯ ಕೇಂದ್ರ ಬೆಳ್ತಂಗಡಿ ಮತ್ತು ಪ್ರಾಥಮಿಕ ಅರೋಗ್ಯ ಕೇಂದ್ರ, ವೇಣೂರು ಇಲ್ಲಿ ಸುಮಾರು 37 ವರ್ಷಗಳ ಕಾಲ ಬಡರೋಗಿಗಳ ಜೊತೆ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ವಿಜಯ ಕುಮಾರಿ ಕೆ ಇವರ ಸೇವೆಯನ್ನ ಗೌರವಿಸುತ್ತ ಫೆ. 12 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ನಡೆದ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಗುರುತಿಸಿ ಸನ್ಮಾನಿಸಲಾಯಿತು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಅಧ್ಯಕ್ಷರಾದ ಜೆಸಿ HGF ರಂಜಿತ್ ಎಚ್ ಡಿ ಯವರು ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮದಲ್ಲಿ ವಲಯದ ಉಪಾಧ್ಯಕ್ಷರಾದ JFM ಶಂಕರ್ ರಾವ್ ಬಿ, ಲೇಡಿ ಜೆಸಿ ಸಂಯೋಜಕರಾದ ಜೆಸಿ ಶ್ರುತಿ ರಂಜಿತ್, ಕಾರ್ಯಕ್ರಮದ ನಿರ್ದೇಶಕರಾದ ಜೆಸಿ ಪ್ರೀತಮ್ ಶೆಟ್ಟಿ, ಜೆಸಿ ಪ್ರಮೋದ್, ಘಟಕದ ಪೂರ್ವಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

ನಂತರ ಜೆಸಿ ಕುಟುಂಬ ಸದಸ್ಯರಿಗೆ “ಜೆಸಿ ಸಂಭ್ರಮ” ಕುಟುಂಬೋತ್ಸವ ಕಾರ್ಯಕ್ರಮವು ಘಟಕದ ಉಪಾಧ್ಯಕ್ಷರಾದ
ಪ್ರೀತಮ್ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ಜೆಸಿ ಸಚಿನ್ ಸಾಲಿಯಾನ್ ಇವರ ನಿರೂಪಣೆಯೊಂದಿಗೆ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ವೇದಿಕೆ ಅಹ್ವಾನವನ್ನು ಜೆಸಿ ರಜತ್, ಜೆಸಿ ವಾಣಿನ್ನು ಜೆಸಿ ರಾಮಕೃಷ್ಣ, ಹಾಗೂ ಸನ್ಮಾನ ಪತ್ರವನ್ನು ಜೆಸಿ ಮಾಮಿತಾ ಸುಧೀರ್ ವಾಚಿಸಿದರು. ಕಾರ್ಯದರ್ಶಿ ಜೆಸಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!