July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ


ತೆಕ್ಕಾರು, ಶ್ರೀ ನಾಭಿರಾಜ್ ಹೆಗ್ಡೆ ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮ ನಿವಾಸಿ ನಾಭಿರಾಜ್ ಹೆಗ್ಡೆ ಸಮಾಜ ಸೇವಾ ಚಟುವಟಿಕೆಗಳ 000pಮೂಲಕ ಜನಾನುರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಹಲವಾರು ಸಮಾಜಮುಖಿ ಚಟುವಟಿಕೆಗಳಲಿ ಭಾಗವಹಿಸುತಿದ್ದರು ತೆಕ್ಕಾರು ಯುವಕ ಮಂಡಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಟ್ಟಿಕಳ ಇದರ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಮಾದರಿರೀತಿಯಲ್ಲಿ ವಾರ್ಷಿಕೋತ್ಸವ ಆಯೋಜಿಸಿ ಶಿಕ್ಷಣ ಸಂಸ್ಥೆಗಳ ಪೋಷಕರಾಗಿದ್ದ ಇವರು ಬಿದ್ದುಕಲ್ಲು ಶ್ರೀ ಅದಿನಾತೇಶ್ವರ ಬಸದಿ, ತೆಕ್ಕಾರು ಇದರ ಅಧ್ಯಕ್ಷರಾಗಿ ಅಭಿವೃದ್ಧಿ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಮೂಲತ ನಾರಾವಿಯ .. ತೆಕ್ಕಾರು ಮರಮ ಅನಂತಯ್ಯ ಕೊಂಡೆಯವರ ಪುತ್ರಿಯನ್ನು ವಿವಾಹವಾಗಿ ಮರಮದಲ್ಲೆ ನೆಲೆಸಿ ಪ್ರಗತಿಪರ ಕೃಷಿಕರಾಗಿದ್ದರು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಜವರ್ಮ ಜೈನ್, ಸಹೋದರ ಬೆಳ್ತಂಗಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಶ್ರೀ ವಿನಯ ಹೆಗ್ಡೆ, ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ, ಉಪ್ಪಿನಂಗಡಿಯ ಸಾಮಾಜಿಕ ಮುಂದಾಳು ಮಹೇಂದ್ರ ವರ್ಮ, ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ ಪೂಜಾರಿ, ಟ್ರಸ್ಟಿಗಳಾದ ಮಂಜುನಾಥ್ ಸಾಲ್ಯಾನ್, ರವೀಂದ್ರ ಪಿಲಿಬೈಲ್, ಸತೀಶ್ ಹೊಸ ಮುಗ್ರು ಹಾಗೂ ತೆಕ್ಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್, ನಿರ್ದೇಶಕರು , ಸಿಬ್ಬಂದಿ ವರ್ಗ ಹಾಗೂ ಕುಟುಂಬ ವರ್ಗ ಮತ್ತು ಗ್ರಾಮಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya
error: Content is protected !!