July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಚೊಚ್ಚಲ 15 ನೇ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ, ಮುಖ್ಯವಾಗಿ ಕೃಷಿ ,ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿ ಜನಸಾಮಾನ್ಯರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 2024-25 ರಲ್ಲಿ ಗ್ಯಾರಂಟಿಗಳಿಗೆ ರೂ 52,000 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದು ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ಸಾವಿರದಿಂದ 55 ಸಾವಿರವನ್ನು ಒದಗಿಸುತ್ತಿದೆ. ಇದು ಒಂದು ಜಾಗತಿಕ ದಾಖಲೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 9 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆ ಜೊತೆಗೆ ಸುಮಾರು 21,168 ಕೋಟಿ ರೂ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮೋದನೆಗೊಂಡ 2230 ಕೋಟಿ ರೂಗಳ ಕಾಮಗಾರಿ ಯೋಜನೆಗೂ ಅನುಮೋದನೆ ನೀಡಿದೆ ಸರ್ಕಾರ. ಅಭಿವೃದ್ಧಿಯಲ್ಲಿ ಯಾವ ರಾಜಕಾರಣ ಇಲ್ಲಾ ಎಂಬುದು ಬಹಳ ಸ್ಪಷ್ಟವಾಗಿದೆ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟನ್ನು ರಾಜ್ಯದ ಸಮಸ್ತ ಜನರಿಗೆ ನೀಡಿದೆ ಎಂದು ತಿಳಿಸಿದ್ದಾರೆ.

Related posts

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!