23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಚೊಚ್ಚಲ 15 ನೇ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ, ಮುಖ್ಯವಾಗಿ ಕೃಷಿ ,ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿ ಜನಸಾಮಾನ್ಯರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 2024-25 ರಲ್ಲಿ ಗ್ಯಾರಂಟಿಗಳಿಗೆ ರೂ 52,000 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದು ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ಸಾವಿರದಿಂದ 55 ಸಾವಿರವನ್ನು ಒದಗಿಸುತ್ತಿದೆ. ಇದು ಒಂದು ಜಾಗತಿಕ ದಾಖಲೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 9 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆ ಜೊತೆಗೆ ಸುಮಾರು 21,168 ಕೋಟಿ ರೂ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮೋದನೆಗೊಂಡ 2230 ಕೋಟಿ ರೂಗಳ ಕಾಮಗಾರಿ ಯೋಜನೆಗೂ ಅನುಮೋದನೆ ನೀಡಿದೆ ಸರ್ಕಾರ. ಅಭಿವೃದ್ಧಿಯಲ್ಲಿ ಯಾವ ರಾಜಕಾರಣ ಇಲ್ಲಾ ಎಂಬುದು ಬಹಳ ಸ್ಪಷ್ಟವಾಗಿದೆ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟನ್ನು ರಾಜ್ಯದ ಸಮಸ್ತ ಜನರಿಗೆ ನೀಡಿದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya
error: Content is protected !!