23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ : ಕೈಗಾರಿಕಾ ನೀತಿ 2020-25 ರಲ್ಲಿ ತಂತ್ರಜ್ಞಾನ ಉನ್ನತೀಕರಣಕ್ಕೆ ಶೇ 5-6% ಬಡ್ಡಿ ಸಹಾಯಧನ ನೀಡಲಾಗುತ್ತಿದೆ. ಹೊಸ ಕೈಗಾರಿಕಾ ನೀತಿಯಂತೆ ಹೊಸ ಬಂಡವಾಳ ಹೂಡಿಕೆಗೆ ಒಟ್ಟು ಸ್ಥಿರಾಸ್ತಿಯ 25% ರಿಂದ 35% ರಷ್ಟು ಗರಿಷ್ಠ ರೂ.1.05 ಕೋಟಿ ಬಂಡವಾಳ ಹೂಡಿಕೆಗೆ ಸಹಾಯಧನ ನೀಡಲಾಗುತ್ತಿದ್ದು, ಹೂಡಿಕೆಗೆ 75% ರಿಂದ 100% ಮುದ್ರಾಂಕ ಶುಲ್ಕ ವಿನಾಯಿತಿ ಮತ್ತು ನೋಂದಣಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್‍ನಲ್ಲಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದ್ದಾರೆ.


ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಕರಾವಳಿಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಹೆಂಚು ಉದ್ಯಮ ಕುಸಿತ ಕಂಡಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹೆಂಚು ಉದ್ಯಮದ ಪುನಶ್ಚೇತನಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು? ಹೆಂಚುಗಳ ಖರೀದಿ ಕ್ಷೀಣ, ಆವೆ ಮಣ್ಣಿನ ದರ ಹೆಚ್ಚಲ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಹೆಂಚು ಉದ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಖಾನೆಗಳು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಆರ್ಥಿಕವಾಗಿ ಹೆಚ್ಚಿನ ಪರಿಹಾರ ನೀಡಲು ಸರ್ಕಾರ ಕೈಗೊಂಡ ಕ್ರಮಗಳೇನು ಎಂದು ಕೇಳಿದ ಪ್ರಶ್ನಿಸಿದರು.


ಕಾರ್ಖಾನೆಗಳಿಗೆ ಭೂ ಪರಿವರ್ತನೆ ಶುಲ್ಕವನ್ನು ಶೇ.75 ರಿಂದ 100% ರಷ್ಟು ಮರುಪಾವತಿ ಮಾಡಲಾಗುತ್ತಿದ್ದು, ವಿದ್ಯುತ್ ತೆರಿಗೆ ವಿನಾಯಿತಿಯನ್ನು 100% ಗರಿಷ್ಠ 4 ರಿಂದ 8 ವರ್ಷಗಳವರೆಗೆ ನೀಡಲಾಗುತ್ತಿದೆ. ಸೂಕ್ಷ್ಮ ಮತ್ತು ಕೈಗಾರಿಕೆಗಳಿಗೆ ಅವು ಬಳಸಿದ ಪ್ರತಿ ಯುನಿಟ್ ಗೆ ರೂ.1 ರಂತೆ ವರ್ಷಗಳ ಕಾಲ ವಿದ್ಯುತ್ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya
error: Content is protected !!