March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಕಲ್ಮಂಜ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.17ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಂಚಾರಿ ಮತ್ತು ವಿಸ್ತರಣೆ, ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ವಿಶ್ವನಾಥ್ ರವರು ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಲೈನ್ ಮ್ಯಾನ್ ಗಳು ಫೋನ್ ಕರೆಗಳನ್ನು ಸ್ವೀಕರಿಸದೇ ಇರುವುದನ್ನು ಗ್ರಾಮಸ್ಥರು ಮೆಸ್ಕಾಂ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರು. ಹಾಗೂ ಗುತ್ತು ಬೈಲ್ ನಲ್ಲಿ ತಂತಿಗಳು ಜೋತು ಬಿದ್ದಿರುವುದನ್ನು ತಿಳಿಸಿದರು.

ಶಾಲೆ ರಸ್ತೆಗಳ ಬಳಿ ಬ್ಯಾರಿಗೇಟ್ ವ್ಯವಸ್ಥೆಗೆ ಪಂಚಾಯತ್ ಗೆ ಮನವಿ ಮಾಡಿದರು. ಹಾಗೂ ಸಿದ್ದಬೈಲ್ ಶಾಲೆಯ ಬಳಿ ತಡೆಗೋಡೆ ವ್ಯವಸ್ಥೆ ಮಾಡಿಸುವುದರ ಬಗ್ಗೆ ಗ್ರಾಮಸ್ಥರು ಮನವಿ ಮಾಡಿಕೊಂಡರು.

ಅರಣ್ಯ ಇಲಾಖೆ ಅಧಿಕಾರಿ ಮಾತನಾಡಿ ಆನೆದಾಳಿ ಬೆಳೆಪರಿಹಾರದ ಮಾಹಿತಿಯನ್ನು ನೀಡಿದರು. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಯೋಜನೆ ಮತ್ತು ಸೌಲಭ್ಯಗಳ ಮಾಹಿತಿ ನೀಡಿದರು.

ಮಾರ್ಗದರ್ಶಿ ಅಧಿಕಾರಿ ಮಾತನಾಡಿ ನಿಮ್ಮ ಗ್ರಾಮ ಮಟ್ಟದಲ್ಲಿರುವಂತಹ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳುವುದಕ್ಕೆ ಗ್ರಾಮ ಸಭೆ ಬಹಳ ಅನುಕೂಲವಾಗುತ್ತದೆ. ಗ್ರಾಮ ಸಭೆಗೂ ಮುನ್ನ ವಾರ್ಡ್ ಸಭೆಗಳು ನಡೆಯುತ್ತದೆ, ವಾರ್ಡ್ ಸಭೆಯಲ್ಲಿ ಸಮಸ್ಯೆಗಳನ್ನು ಪಟ್ಟಿ ಮಾಡಿ ಗ್ರಾಮ ಸಭೆಯಲ್ಲಿ ಮುಂದಿಟ್ಟು ಸಮಸ್ಯೆಗಳಿಗೆ ಪರಿಹಾರ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬಹುದು. ಇದು ಗ್ರಾಮ ಸಭೆಯ ಉದ್ದೇಶವಾಗಿರುತ್ತದೆ ಎಂದು ಹೇಳಿದರು.

ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಉಪಾಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಕಾರ್ಯದರ್ಶಿ ಶ್ರೀಮತಿ ಸರೋಜಿನಿ ಕೆ., ಸದಸ್ಯರಾದ ರಾಧಾಕೃಷ್ಣ ಗೌಡ, ವರದಾಕ್ಷ ಆಚಾರ್ಯ, ಶ್ರೀಮತಿ ಲೀಲಾ, ಎಂ ಶ್ರೀಧರ, ಶ್ರೀಮತಿ ಸವಿತಾ, ಕೃಷ್ಣ ಮೂರ್ತಿ, ಪ್ರವೀಣ, ಶ್ರೀಮತಿ ಶೋಭವತಿ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಜಮಾ ಖರ್ಚಿನ ವಿವರವನ್ನು ಶ್ರೀಮತಿ ಸರೋಜಿನಿ, ಉದ್ಯೋಗ ಖಾತರಿ ವಿವರವನ್ನು ರಮೇಶ್, ಹಾಗೂ ಬೇಡಿಕೆಗಳ ವಿವರವನ್ನು ರುಕೇಶ್ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಝ್ ಕೆ. ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya
error: Content is protected !!