23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ R15 ಮಾದರಿಯ ಮೋಟಾರ್‌ ಸೈಕಲ್‌ ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ.

ಕೂತ್ಕುಂಜ ಗ್ರಾಮ ಸುಳ್ಯ ನಿವಾಸಿ ಅಖಿಲೇಶ್, ಎಸ್.(31) ಎಂಬವರ ದೂರಿನಂತೆ, ಫೆ.14 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆ ಎಂಬಲ್ಲಿರುವ ಚಿಕ್ಕಮ್ಮನ ಮನೆಗೆ ಹೋಗಿದ್ದು ನೆರೆಮನೆಯ ರಾಜಪ್ಪ ಗೌಡರ ಮನೆ ಶೆಡ್ಡಿನಲ್ಲಿ, ತನ್ನ ಬಾಬ್ತು KA-21-Y-0967 ನೇ ನೋಂದಣಿ ಸಂಖ್ಯೆಯ YAMAHA ಕಂಪನಿಯ R15 ಮಾದರಿಯ ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋಗಿದ್ದು, ಮರುದಿನ ಫೆ.15 ರಂದು ಬೆಳಿಗ್ಗೆ ಊರಿಗೆ ವಾಪಾಸ್ಸು ಹೋಗಲು ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳಕ್ಕೆ ಹೋಗಿ ನೋಡಿದಾಗ ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳದಲ್ಲಿ ಕಾಣದಿದ್ದು, ಅಖಿಲೇಶ್ ರವರು ಮನೆಯ ಸುತ್ತಮುತ್ತ ವಠಾರದಲ್ಲಿ ಹುಡುಕಾಡಿ ಪತ್ತೆಯಾಗದಿದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 65000/ -ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 09/2024 ಕಲಂ: 379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!