23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು.

ಶ್ರೀ ರಾಮ ಭಜನಾ ಮಂದಿರ ಕೊಕ್ಕಡ ದ ಬಳಿಯಿಂದ, ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷಗಳೊಂದಿಗೆ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು.

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು ,ತಾಲೂಕು ವಲಯ , ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು ಸಹಶಿಕ್ಷರು , ಶಾಲಾ ಮಕ್ಕಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ,ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು/ ಪದಾದಿಕಾರಿಗಳು . ಮೇಲ್ವಿಚಾರಕರು ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗ ,ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya
error: Content is protected !!