22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.17 ರಿಂದ ಪ್ರಾರಂಭಗೊಂಡು ಫೆ.26 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳಿಗ್ಗೆ ಕಾರ್ಯಾಲಯ ಉದ್ಘಾಟನೆಯನ್ನು ಶಿಶಿಲ ಸೀಮಾ ಚಿತ್ಪಾವನ ಸಂಘದ ಅಧ್ಯಕ್ಷ ವರದಶಂಕರ ದಾಮ್ಲೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಬ್ರಹ್ಮಕಲಶೋತ್ಸವ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಮುರುಳೀಧರ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಸಹ ಸಂಚಾಲಕ ಜಯಪ್ರಸಾದ್ ಶೆಟ್ಟಿಗಾರ್, ಅರ್ಚಕ ಉಲ್ಲಾಸ್ ಭಟ್ ಅಂತರ ಹಾಗೂ ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರು,ವೈದಿಕ ಸಮಿತಿಯವರು, ಸದಸ್ಯರು, ಊರವರು ಉಪಸ್ಥಿತರಿದ್ದರು.

ಸಂಜೆ 5.00ಕ್ಕೆ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ಹಾಗೂ ವೈದಿಕ ಕಾರ್ಯಗಳು ಆಚಾರ್ಯಾದಿ ಋತ್ವಿಕ್ ವರಣ, ತೋರಣ ಮೂಹೂರ್ತ, ಉಗ್ರಾಣ ಮೂಹೂರ್ತ, ಸಪ್ತಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ದಿಶಾ ಬಲಿ ಅಂಕುರಾರೋಪಣ ಹಾಗೂ ಸಂಜೆ 6ಕ್ಕೆ ಉಗ್ರಾಣ ಉದ್ಘಾಟನೆ ಜರುಗಲಿದೆ.

Related posts

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya
error: Content is protected !!