23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ ಕಲ್ಪಿಸಿದ್ದು ಕರ್ನಾಟಕದಿಂದ ಪ್ರತೀದಿನ 1,500 ಮಂದಿಗೆ ರೈಲಿನ ಮೂಲಕ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು ಭಕ್ತರಿಗೆ ಮಾರ್ಗದರ್ಶನ ನೀಡಲೆಂದು ಪ್ರತೀ ರಾಜ್ಯದಿಂದ 10 ಮಂದಿಯಂತೆ 270 ಪ್ರಬಂಧಕರನ್ನು ನೇಮಿಸಲಾಗಿದೆ. ರಾಜ್ಯದ ಮೊದಲ 10 ಮಂದಿಯ ತಂಡದಲ್ಲಿ ಬೆಳ್ತಂಗಡಿ ತಾಲೂಕಿನ ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರು ತಂಡವು ಫೆ 5ರಿಂದ 18ರ ವರೆಗೆ ಸೇವೆ ಸಲ್ಲಿಸುತ್ತಿದೆ.

ಬೆಳಾಲು ಗ್ರಾಮದ ಸೀತಾರಾಮ ಅವರು ಬಿಜೆಪಿ ಬೆಳ್ತಂಗಡಿ ಮಂಡಲದಲ್ಲಿ 2 ಬಾರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಡಲ ಉಪಾಧ್ಯಕ್ಷರಾಗಿ, ಪ್ರಸಕ್ತ ದ.ಕ. ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದವರೆಗೆ ಈ ಅವಕಾಶವನ್ನು ಭಕ್ತರಿಗೆ ನೀಡಲಾಗಿದ್ದು, 3 ತಂಡಗಳಾಗಿ 30 ಮಂದಿ ಪ್ರಬಂಧಕರು 12 ದಿನಗಳಂತೆ 36 ದಿನ ಸೇವೆ ನೀಡಲಿದ್ದಾರೆ. ಇವರನ್ನು ಉತ್ತರ ಪ್ರದೇಶ ಸರಕಾರದಿಂದ ನಿಯೋಜಿಸಿದ ವ್ಯವಸ್ಥಾ ತಂಡದ ಮಾರ್ಗದರ್ಶನದಡಿ ಜೋಡಿಸಲಾಗಿದೆ.

ವಿಶೇಷತೆಗಳು: ಕರ್ನಾಟಕದಿಂದ ಆಗಮಿಸುವ ಕಾರ್ಯಕರ್ತರಿಗೆ ರೈಲಿನ 3 ಸಾವಿರ ರೂ ಪ್ರಯಾಣ ದರ ಹೊರತುಪಡಿಸಿ ದೇವರ ದರ್ಶನ, ಊಟ, ವಸತಿ ಎಲ್ಲವೂ ಉಚಿತ. ಭಕ್ತರಿಗೆ 100ಕ್ಕೂ ಅಧಿಕ ಸಂಘ-ಸಂಸ್ಥೆಗಳು ದಿನದ ಮೂರೂ ಹೊತ್ತು ಉಚಿತ ಆಹಾರ ಕಲ್ಪಿಸುತ್ತಿವೆ. 6.50 ಲಕ್ಷ ಮಂದಿಗೆ ಪ್ರತಿನಿತ್ಯ ಈ ಸೇವೆ ಲಭ್ಯವಾಗುತ್ತಿದೆ.
ವಸತಿ ವ್ಯವಸ್ಥೆ, ಭಕ್ತರ ವಸತಿಗೆ 4 ಕಿ.ಮೀ. ದೂರದ 2,500 ಎಕ್ರೆಯಲ್ಲಿ 4,500 ಮಂದಿಗೆ ಸ್ಥಳಾವಕಾಶವಿರುವ ಜರ್ಮನ್ ಟೆಂಟ್ ಅಳವಡಿಸಲಾಗಿದೆ. ಒಟ್ಟು 5 ಟೆಂಟ್‌ಗಳಿದ್ದು 22 ಸಾವಿರ ಮಂದಿಗೆ ಏಕಕಾಲದಲ್ಲಿ ವ್ಯವಸ್ಥೆ ಒದಗಿಸುತ್ತಿದೆ. ಪುರುಷ, ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಇದೆ. ಅಲ್ಲಿಂದ ನೇರವಾಗಿ ಶ್ರೀರಾಮನ ದರ್ಶನಕ್ಕೆ ತೆರಳಲು ಉಚಿತ ಎಲೆಕ್ಟಿಕಲ್ ಬಸ್ ಸೇವೆ ಇದೆ.

Related posts

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya
error: Content is protected !!