25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ R15 ಮಾದರಿಯ ಮೋಟಾರ್‌ ಸೈಕಲ್‌ ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ.

ಕೂತ್ಕುಂಜ ಗ್ರಾಮ ಸುಳ್ಯ ನಿವಾಸಿ ಅಖಿಲೇಶ್, ಎಸ್.(31) ಎಂಬವರ ದೂರಿನಂತೆ, ಫೆ.14 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆ ಎಂಬಲ್ಲಿರುವ ಚಿಕ್ಕಮ್ಮನ ಮನೆಗೆ ಹೋಗಿದ್ದು ನೆರೆಮನೆಯ ರಾಜಪ್ಪ ಗೌಡರ ಮನೆ ಶೆಡ್ಡಿನಲ್ಲಿ, ತನ್ನ ಬಾಬ್ತು KA-21-Y-0967 ನೇ ನೋಂದಣಿ ಸಂಖ್ಯೆಯ YAMAHA ಕಂಪನಿಯ R15 ಮಾದರಿಯ ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋಗಿದ್ದು, ಮರುದಿನ ಫೆ.15 ರಂದು ಬೆಳಿಗ್ಗೆ ಊರಿಗೆ ವಾಪಾಸ್ಸು ಹೋಗಲು ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳಕ್ಕೆ ಹೋಗಿ ನೋಡಿದಾಗ ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳದಲ್ಲಿ ಕಾಣದಿದ್ದು, ಅಖಿಲೇಶ್ ರವರು ಮನೆಯ ಸುತ್ತಮುತ್ತ ವಠಾರದಲ್ಲಿ ಹುಡುಕಾಡಿ ಪತ್ತೆಯಾಗದಿದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 65000/ -ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 09/2024 ಕಲಂ: 379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya
error: Content is protected !!