September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ R15 ಮಾದರಿಯ ಮೋಟಾರ್‌ ಸೈಕಲ್‌ ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ.

ಕೂತ್ಕುಂಜ ಗ್ರಾಮ ಸುಳ್ಯ ನಿವಾಸಿ ಅಖಿಲೇಶ್, ಎಸ್.(31) ಎಂಬವರ ದೂರಿನಂತೆ, ಫೆ.14 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮದ್ಮಲ್‌ ಕಟ್ಟೆ ಎಂಬಲ್ಲಿರುವ ಚಿಕ್ಕಮ್ಮನ ಮನೆಗೆ ಹೋಗಿದ್ದು ನೆರೆಮನೆಯ ರಾಜಪ್ಪ ಗೌಡರ ಮನೆ ಶೆಡ್ಡಿನಲ್ಲಿ, ತನ್ನ ಬಾಬ್ತು KA-21-Y-0967 ನೇ ನೋಂದಣಿ ಸಂಖ್ಯೆಯ YAMAHA ಕಂಪನಿಯ R15 ಮಾದರಿಯ ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋಗಿದ್ದು, ಮರುದಿನ ಫೆ.15 ರಂದು ಬೆಳಿಗ್ಗೆ ಊರಿಗೆ ವಾಪಾಸ್ಸು ಹೋಗಲು ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳಕ್ಕೆ ಹೋಗಿ ನೋಡಿದಾಗ ಮೋಟಾರ್‌ ಸೈಕಲ್‌ ನಿಲ್ಲಿಸಿದ ಸ್ಥಳದಲ್ಲಿ ಕಾಣದಿದ್ದು, ಅಖಿಲೇಶ್ ರವರು ಮನೆಯ ಸುತ್ತಮುತ್ತ ವಠಾರದಲ್ಲಿ ಹುಡುಕಾಡಿ ಪತ್ತೆಯಾಗದಿದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 65000/ -ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 09/2024 ಕಲಂ: 379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!